ರಾಜ್ಯದಲ್ಲಿ ಸದ್ಯಕ್ಕೆ ಮದ್ಯ ಮಾರಾಟ ಬೇಡವೇ ಬೇಡ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸದ್ಯ ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧ ಮುಂದುವರೆದಿದೆ. ಈ ಹಂತದಲ್ಲಿ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿದರೆ, ಬಡವರಿಗೆ, ಕಾರ್ಮಿಕರಿಗೆ ನೀಡುವ ಉಚಿತ ಆಹಾರ ಸಾಮಗ್ರಿಗಳು ಪೋಲಾಗುವ ಸಾಧ್ಯತೆ ಇದೆ. ಹೀಗಾಗಿ ರಾಜ್ಯದಲ್ಲಿ ಸದ್ಯಕ್ಕೆ ಮದ್ಯ ಮಾರಾಟ ಬೇಡವೇ ಬೇಡ.ಸದ್ಯ ದೇಶಾದ್ಯಂತ ಮದ್ಯ ಮಾರಾಟಕ್ಕೆ ಬ್ರೇಕ್ ನೀಡಿದೆ. ಕೇಂದ್ರ ಸರ್ಕಾರ ಕೂಡ ಸದ್ಯಕ್ಕೆ ಮದ್ಯ ಮಾರಾಟಕ್ಕೆ ಅನುಮತಿ ಕೊಟ್ಟಿಲ್ಲ. ಮದ್ಯ ಸೇವಿಸುವುದರಿಂದ ವ್ಯಕ್ತಿಯಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗಲಿದೆ. ಹೀಗಾಗಿ ಮದ್ಯ ಮಾರಾಟಕ್ಕೆ ಅವಕಾಶ ಕೊಡದೇ ಇರುವುದೇ ಒಳಿತು ಎಂದು ಪ್ರಧಾನಿ ಮೋದಿಗೆ ಆರೋಗ್ಯ ತಜ್ಞರು ಸಲಹೆ ನೀಡಿದ್ದಾರೆ ಎಂದು ಹೇಳಿದರು.
ಸದ್ಯಕ್ಕೆ ಮದ್ಯ ಮಾರಾಟ ಬೇಡವೇ ಬೇಡ: ಆರ್.ಅಶೋಕ್
Please follow and like us: