ಸಮಾಜವಾದಿ ಪಕ್ಷದ ಸರ್ಕಾರದ ವಿರುದ್ಧ ಮೋದಿ ವಾಗ್ಬಾಣ..!

ಉತ್ತರ ಪ್ರದೇಶದಲ್ಲಿ ಹಿಂದೆ ಆಳ್ವಿಕೆ ನಡೆಸಿದ ಸರ್ಕಾರ ಕೇಂದ್ರದ ವಸತಿ ಯೋಜನೆಗಳ ಅನುಷ್ಠಾನಕ್ಕೆ ಅಡ್ಡಿಯುಂಟು ಮಾಡುವ ಮೂಲಕ, ರಾಜ್ಯದ ಬಡವರಿಗೆ ಮನೆ ನಿರ್ಮಿಸಿಕೊಡಲು ಆಸಕ್ತಿ ತೋರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹಿಂದಿನ ಸಮಾಜವಾದಿ ಪಕ್ಷದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಪಿಎಂಎವೈಯು ಯೋಜನೆಯ 75 ಸಾವಿರ ಫಲಾನುಭವಿಗಳಿಗೆ ವರ್ಚುವಲ್ರೂಪದಲ್ಲಿ ಕೀಗಳನ್ನು ಹಸ್ತಾಂತರಿಸಿ ಮಾತನಾಡಿದ ಅವರು, 2017ಕ್ಕೂ ಹಿಂದೆ, ಉತ್ತರ ಪ್ರದೇಶಕ್ಕೆ ಕೇಂದ್ರ ಸರ್ಕಾರ, ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಬಡವರಿಗೆ ಮನೆ ನಿರ್ಮಿಸಿಕೊಡಲು 18 ಸಾವಿರ ಕೋಟಿ ಮಂಜೂರು ಮಾಡಿತ್ತು. ಆದರೆ, ಸರ್ಕಾರ 18 ಮನೆಗಳನ್ನೂ ನಿರ್ಮಾಣ ಮಾಡಲಿಲ್ಲ ಎಂದು ಆರೋಪಿಸಿದರು. ಆದರೆ, ಈಗ ಯೋಗಿ ಆದಿತ್ಯನಾಥ ನೇತೃತ್ವದ ಸರ್ಕಾರ ಇದೇ ಯೋಜನೆಯಡಿ ಉತ್ತರ ಪ್ರದೇಶದಲ್ಲಿ 9 ಲಕ್ಷ ಮನೆಗಳನ್ನು ನಿರ್ಮಾಣ ಮಾಡಿದೆ. 14 ಲಕ್ಷ ಮನೆಗಳು ನಿರ್ಮಾಣ ಹಂತದಲ್ಲಿವೆ ಎಂದು ಮೋದಿ ಹೇಳಿದರು. ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ರಾಜ್ಯದ ಮೂರು ಕೋಟಿ ಬಡ ಕುಟುಂಬಗಳನ್ನು ಲಕ್ಷಾಧಿಪತಿಗಳನ್ನಾಗಿ ಮಾಡಿದೆ ಎಂದು ಪ್ರಧಾನಿ ಇದೇ ಸಂದರ್ಭದಲ್ಲಿ ಹೇಳಿದರು.

 

Please follow and like us:

Leave a Reply

Your email address will not be published. Required fields are marked *

Next Post

ಹ್ಯಾಂಡ್ಸಮ್‌ HUNK ಮಹೇಶ್‌ ಬಾಬು LOVES ಕ್ಲಾಸಿ ಬ್ಯೂಟಿ ನಮ್ರತಾ ಶಿರೋಡ್ಕರ್

Tue Oct 5 , 2021
ಬಾಲಿವುಡ್​ನಲ್ಲಿ ಸ್ಟಾರ್​ ನಟರ ಜೊತೆ ಸಿನಿಮಾಗಳಲ್ಲಿ ನಟಿಸಿದ್ದ ನಟಿ ನಮ್ರತಾ ಶಿರೋಡ್ಕರ್ ತೆಲುಗಿನಲ್ಲೂ ಅಭಿನಯಿಸಿದ್ದಾರೆ. ಮಹೇಶ್​ ಬಾಬು ಜೊತೆ ಮದುವೆಯಾದ ನಂತರ ಬಣ್ಣದ ಲೋಕದಿಂದ ದೂರ ಉಳಿದಿದ್ರು. ಬಣ್ಣದ ಲೋಕದಿಂದ ದೂರ ಇದ್ರು ಸಹ ನಮ್ರತಾ ಶಿರೋಡ್ಕರ್ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಆಕ್ಟಿವ್‌ ಆಗಿದ್ದಾರೆ. ಆದರೆ ಈಗ ಪತಿ ಮಹೇಶ್ ಬಾಬು ಜೊತೆ ನಮ್ರತಾ ಮತ್ತೆ ಬಣ್ಣ ಹಚ್ಚಿದ್ದಾರೆ. ಹೌದು, ಮಹೇಶ್​ ಬಾಬು ಜೊತೆ ಮದುವೆಗೂ ಮುನ್ನ ಸಿನಿಮಾದಲ್ಲಿ ತೆರೆ ಹಂಚಿಕೊಂಡಿದ್ರು. […]

Advertisement

Wordpress Social Share Plugin powered by Ultimatelysocial