ಸರ್ಕಾರಕ್ಕೆ ಆಶಾಕಾರ್ಯಕರ್ತೆಯರ ಎಚ್ಚರಿಕೆ

ಜುಲೈ 10ರಿಂದ ಬೇಡಿಕೆಗಳನ್ನು ಈಡೇರಿಸದಿದ್ದರೆ ಅನಿರ್ದಿಷ್ಟವಾಗಿ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕರ್ಯಕರ್ತೆಯರ ಸಂಘದ ರಾಜ್ಯ ಘಟಕದ ಕಾರ್ಯದರ್ಶಿ ಡಿ.ನಾಗಲಕ್ಷ್ಮೀ ತಿಳಿಸಿದರು. ಜೂನ್ 30ರಂದು ರಾಜ್ಯದಾದ್ಯಂತ ಎಲ್ಲ ಜಿಲ್ಲಾಧಿಕಾರಿಗಳು, ತಹಶೀಲ್ದಾರರು, ಆರೋಗ್ಯ ಸಚಿವ ಸೇರಿ ಎಲ್ಲ ಸಚಿವರು ಹಾಗೂ ಶಾಸಕರಿಗೂ ಮನವಿ ಸಲ್ಲಿಸಿದ್ದೇವೆ. ನಂತರ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸುವುದಾಗಿ ಅವರೂ ಹೇಳಿದ್ದಾರೆ. ಆದರೆ, ಈವರೆಗೆ ನಮಗೆ ಮುಖ್ಯಮಂತ್ರಿಗಳ ಕಚೇರಿಯಿಂದಾಗಲಿ, ಯಾರಿಂದಲೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹಾಗಾಗಿ ಜುಲೈ 10 ರಿಂದ ಅನಿರ್ದಿಷ್ಟವಾಗಿ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಎಂದು ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

 

 

 

 

Please follow and like us:

Leave a Reply

Your email address will not be published. Required fields are marked *

Next Post

ಬೆಂಗಳೂರು ಡಿಸಿ ಕಚೇರಿ ಸೀಲ್‌ಡೌನ್ ಆಗಿಲ್ಲ

Mon Jul 6 , 2020
ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ಕಂದಾಯ ಭವನದಲ್ಲಿ ಇರುವ ಉಪವಿಭಾಗಾಧಿಕಾರಿಗಳ ಕಚೇರಿಗೂ ಕೊರೊನಾ ಸೋಂಕಿನ ಭಯ ಕಾಡಲಾರಂಭಿಸಿದೆ. ಈ ಕಚೇರಿಗಳು ಸೀಲ್‍ಡೌನ್ ಆಗಿವೆ ಎಂಬ ವದಂತಿ ಹಬ್ಬಿತ್ತು. ಆದರೆ ಸೀಲ್‍ಡೌನ್ ಆಗಿಲ್ಲ ಎಂದು ಕಚೇರಿ ಮೂಲಗಳು ಸ್ಪಷ್ಟ ಪಡಿಸಿವೆ. ಆದರೆ ಸಾರ್ವಜನಿಕರಿಗೆ ಎಂದಿನಂತೆ ಮುಕ್ತ ಪ್ರವೇಶ ಇಲ್ಲ. ಅತ್ಯಗತ್ಯ ತುರ್ತು ಕೆಲಸ ಇರುವ ಸಾರ್ವಜನಿಕರು ತಾವು ಬಂದ ತುರ್ತು ಕೆಲಸದ ಕುರಿತು ವಿವರಿಸಿದಲ್ಲಿ ಆಯಾ ಕಚೇರಿ ವ್ಯವಸ್ಥಾಪಕರು ಭೇಟಿ […]

Advertisement

Wordpress Social Share Plugin powered by Ultimatelysocial