ಸರ್ಕಾರಕ್ಕೆ ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಕೋವಿಡ್-೧೯ ಸೋಂಕು ಮತ್ತು ಲಾಕ್ ಡೌನ್ ಕಾರಣದಿಂದ ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಬದುಕುವುದೇ ಕಷ್ಟವಾಗಿದೆ. ಇವರಿಗೆ ರಾಜ್ಯ ಸÀರ್ಕಾರ ನೆರವು ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಕೋವಿಡ್ ಸೋಂಕು ಹಬ್ಬಿದ ನಂತರ ಲಾಕ್ಡೌನ್ ಮತ್ತು ವಹಿವಾಟುಗಳಿಲ್ಲದೆ ವಿಶೇಷವಾಗಿ ಸಣ್ಣ, ಮಧ್ಯಮ ಕೈಗಾರಿಕೆಗಳು ಬದುಕುಳಿಯುವುದೇ ಕಷ್ಟವಾಗಿದೆ. ಈ ಕೈಗಾರಿಕೆಗಳು ಕೇಂದ್ರದ ಯಾವುದೇ ಟೆಂಡರ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಮುಂಗಡ ಹಣ ಪಾವತಿ ಮಾಡಬೇಕಿಲ್ಲ. ಆದರೆ ರಾಜ್ಯ ಸರ್ಕಾರದಲ್ಲಿ ಮಾತ್ರ ಇಂತಹ ವಿನಾಯಿತಿ ಇಲ್ಲ. ರಾಜ್ಯ ಸರ್ಕಾರ ಈ ಸಣ್ಣ ಕೈಗಾರಿಕೆಗಳಿಗೆ ಕೇಂದ್ರ ಸರ್ಕಾರದ  ಮಾದರಿಯಲ್ಲಿ ವಿನಾಯಿತಿ ನೀಡಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಕುಂದಾಪುರದ ಮಾಜಿ ಕ್ರೀಡಾಪಟು ಕುವೈಟ್ ನಲ್ಲಿ ಬಲಿ

Fri Jul 17 , 2020
ಇಲ್ಲಿನ ಭಂಡಾರ್ ಕಾರ್ಸ್ ಕಾಲೇಜಿನ ಮಾಜಿ ಅಥ್ಲೆಟಿಕ್ಸ್ ಚಾಂಪಿಯನ್, ಖ್ಯಾತ ಕಬಡ್ಡಿ ಮತ್ತು ವಾಲಿಬಾಲ್ ಆಟಗಾರ ಕುಂದಾಪುರ ಖಾರ್ವಿ ಕೇರಿ ನಿವಾಸಿಯೊಬ್ಬರು ಕುವೈಟ್ ನಲ್ಲಿ ನಿಧನರಾಗಿದ್ದಾರೆ. ಕುವೈಟ್‌ನ ಕೆ.ಆರ್. ಎಚ್. ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದ ಇವರು ಕಳೆದ ಕೆಲವು ದಿನಗಳ ಹಿಂದೆ ಅನಾರೋಗ್ಯಕ್ಕೀಡಾಗಿ ತಪಾಸಣೆ ನಡೆಸಿದಾಗ ಕೋವಿಡ್ ಸೋಂಕು ತಗಲಿರುವುದು ದೃಢ ಪಟ್ಟಿತೆನ್ನಲಾಗಿದೆ. ಕಳೆದ ಸುಮಾರು ೨೨ ದಿನಗಳಿಂದಲೂ ಕುವೈಟ್ ನ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಇವರಿಗೆ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ. ಮೃತ […]

Advertisement

Wordpress Social Share Plugin powered by Ultimatelysocial