ರಾಜ್ಯ ಸರ್ಕಾರ ಜನ ವಿರೋಧಿ ಕಾನೂನುಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದು, ಗಣಿ ಹಗರಣಕ್ಕಿಂತ ದೊಡ್ಡ ಹಗರಣಗಳನ್ನು ಕೊರೊನಾ ವೈರಸ್ ಸಂಕಷ್ಟದ ಕಾಲದಲ್ಲಿ ಮಾಡಿದೆ. ಬಳ್ಳಾರಿ ಗಣಿ ಹಗರಣ ವಿರೋಧಿಸಿ ಮಾಡಿದ್ದ ಹೋರಾಟದ ಮಾದರಿಯಲ್ಲಿಯೇ ರಾಜ್ಯ ಸರ್ಕಾರದ ವಿರುದ್ಧ ಹಳ್ಳಿ-ಹಳ್ಳಿಗಳಲ್ಲಿ ಚಳುವಳಿ ಮಾಡುತ್ತೇವೆ ಎಂದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ ಭೂ ಸುಧಾರಣಾ ಕಾನೂನಿಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತಂದಿರುವುರಿAದ ಬಂಡವಾಳಶಾಹಿಗಳಿಗೆ ಅನುಕೂಲ ಆಗಲಿದೆ ಎಂದು. ಸುಗ್ರೀವಾಜ್ಞೆ ಮೂಲಕ ಇಡೀ ರೈತ ಸಮುದಾಯವನ್ನು ನಾಶ ಮಾಡಲು ಹೊರಟಿದ್ದಾರೆ. ಎಲ್ಲರೂ ಕಾರ್ಪೋರೆಟ್ ಸಂಸ್ಥೆಗಳ ಬಾಗಿಲು ಕಾಯಬೇಕಾದ ಸ್ಥಿತಿ ಬರುತ್ತದೆ. ಬಂಡವಾಳಶಾಹಿಗಳು ಭೂಮಿ ಖರೀದಿಸಿ ರಿಯಲ್ ಎಸ್ಟೇಟ್ ಮಾಡುತ್ತಾರೆ. ಆಹಾರ ಉತ್ಪಾದನೆ ಎಲ್ಲಿ ಆಗುತ್ತದೆ ಎಂದು ಸಿದ್ದರಾಮಯ್ಯ ವಿವರಿಸಿದ್ದಾರೆ. ಸುಗ್ರೀವಾಜ್ಞೆ ಹೊರಡಿಸಿದ ದಿನ ಕರ್ನಾಟಕಕ್ಕೆ ಕರಾಳವಾದ ದಿನ. ರೈತರ, ಕೂಲಿ ಕಾರ್ಮಿಕರ, ಹಿಂದುಳಿದವರ ವಿರೋಧಿಯಾದ ತಿದ್ದುಪಡಿ ಸುಗ್ರೀವಾಜ್ಞೆ ಎಂದು ಅವರು ಆರೋಪಿಸಿದ್ದಾರೆ.
ಸರ್ಕಾರಕ್ಕೆ ಬಳ್ಳಾರಿ ಮಾದರಿ ಚಳುವಳಿಯ ಎಚ್ಚರಿಕೆ
Please follow and like us: