ಸರ್ಕಾರದ ತಿದ್ದುಪಡಿ ಎತ್ತಿ ಹಿಡಿದ ಹೈಕೋರ್ಟ್

 

ಬೆಂಗಳೂರು: ಪಟ್ಟಾ ಜಮೀನಿನಲ್ಲಿ ಗಣಿಗಾರಿಕೆ ನಡೆಸಲು ಪರವಾನಗಿಯನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಜಾರಿಗೆ ತಂದಿದ್ದ ತಿದ್ದುಪಡಿಯನ್ನು ಹೈಕೋರ್ಟ್ ಇಂದು ಎತ್ತಿ ಹಿಡಿದಿದೆ.

ಕರ್ನಾಟಕ ಕಿರು ಗಣಿಗಾರಿಕೆ ರಿಯಾಯಿತಿ ಕಾಯ್ದೆಗೆ ನಿಯಮ 32ರ ಅಡಿ ತಿದ್ದುಪಡಿ ತಂದು ರಾಜ್ಯ ಸರ್ಕಾರ ಹೊರಡಿಸಿದ ಆದೇಶ ಪ್ರಶ್ನಿಸಿ ಖಾಲಿದ್ ಪಾಷಾ ಸೇರಿ 250ಕ್ಕೂ ಜನರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಲಾಗಿತ್ತು. ಇಂದು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕಾ ಮತ್ತು ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ವಿಭಾಗೀಯ ಪೀಠ ತೀರ್ಪು ಪ್ರಕಟಿಸಿದೆ. ಜಮೀನಿನ ಒಡೆತನ ಹೊಂದಿರುವ ವ್ಯಕ್ತಿಗಳಿಗೆ ಅದರೊಳಗಿನ ಖನಿಜಗಳ ಮೇಲೂ ಹಕ್ಕಿದೆ. ಅದಕ್ಕಾಗಿ ಸರ್ಕಾರದಿಂದ ಪರವಾನಗಿ ಪಡೆಯಬೇಕಾಗಿಲ್ಲ ಎಂದು ಅರ್ಜಿದಾರರು ಆಕ್ಷೇಪಿಸಿದ್ದರು. ಕರ್ನಾಟಕ ಕಿರು ಗಣಿಗಾರಿಕೆ ರಿಯಾಯಿತಿ ಕಾಯ್ದೆಗೆ ನಿಯಮ 32ರ ನಿಯಮಕ್ಕೆ 2016ರ ಆಗಸ್ಟ್ 12ರಿಂದ ಅನ್ವಯವಾಗುವಂತೆ ತಿದ್ದುಪಡಿ ತಂದಿರುವ ಸರ್ಕಾರ, ಪಟ್ಟಾ ಜಮೀನಿನಲ್ಲಿ ಗಣಿಗಾರಿಕೆ ನಡೆಸಲು ಪರವಾನಗಿ ಪಡೆಯುವುದನ್ನು ಕಡ್ಡಾಯಗೊಳಿಸಿತ್ತು.

 

Please follow and like us:

Leave a Reply

Your email address will not be published. Required fields are marked *

Next Post

ಬಿಳಿ ಬಣ್ಣದ ಅಪರೂಪದ ಹೆಬ್ಬಾವು

Fri Jun 5 , 2020
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕಾವಳಕಟ್ಟೆ ಎಂಬಲ್ಲಿ ಬಿಳಿ ಬಣ್ಣದ ಅಪರೂಪದ ಆಲ್ಟಿನೊ ಹೆಬ್ಬಾವು ಕಾಣಿಸಿಕೊಂಡಿದೆ. ಬಂಟ್ವಾಳದ ಕಾವಳಕಟ್ಟೆ ನಿವಾಸಿ ನೌಶಾದ್ ಎಂಬವರ ಮನೆಯಲ್ಲಿ ಬಿಳಿ ಹೆಬ್ಬಾವು ಕಾಣಸಿಕೊಂಡಿದ್ದು, ನಂತರ ಉರಗತಜ್ಞ ಸ್ನೇಕ್ ಕಿರಣ್ ಅವರಿಗೆ ಮಾಹಿತಿ ನೀಡಲಾಯಿತು. ಅವರು ಕೂಡಲೇ ಸ್ಥಳಕ್ಕೆ ಬಂದು ಸುರಕ್ಷಿತವಾಗಿ ಹಾವನ್ನು ಹಿಡಿದು ಅರಣ್ಯ ಇಲಾಖೆಯ ಗಮನಕ್ಕೆ ತಂದಿದ್ದಾರೆ. ಅರಣ್ಯ ಇಲಾಖೆ ಅದೇಶದಂತೆ ಪಿಲಿಕುಳಕ್ಕೆ ನಿಸರ್ಗ ಧಾಮಕ್ಕೆ ನೀಡಿದ್ದಾರೆ. ಇಂತಹ ಬಿಳಿ ಬಣ್ಣದ ಉರಗಗಳು […]

Advertisement

Wordpress Social Share Plugin powered by Ultimatelysocial