ಬೆಂಗಳೂರಿನಲ್ಲಿ ಕೊರೊನಾ ದೊಡ್ಡಮಟ್ಟದಲ್ಲಿ ಸ್ಫೋಟವಾಗಿದೆ. ಜನ ಭಯಗೊಂಡು ಬೆಂಗಳೂರು ಬಿಡುತ್ತಿದ್ದಾರೆ. ಸರ್ಕಾರ ಅವರಿಗೆ ವಿಶ್ವಾಸ ತುಂಬುವ ಕೆಲಸ ಮಾಡಬೇಕಿತ್ತು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸುರಿನಲ್ಲಿ ಮಾತನಾಡಿದ ಅವರು, ಜನರಿಗೆ ಊಟ, ಕೆಲಸ ಮತ್ತು ಹಣ ನೀಡಬೇಕಿತ್ತು. ಸರ್ಕಾರ ಆ ಕೆಲಸ ಮಾಡಲಿಲ್ಲ. ಜನ ಇದರಿಂದ ಬೆಂಗಳೂರು ಬಿಡುತ್ತಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಸರ್ಕಾರ ವೆಚ್ಚ ಮಾಡಿರುವ ಹಣದ ಲೆಕ್ಕ ಕೊಡಬೇಕು. ಅಧಿಕಾರಿಗಳಿಂದ ನನ್ನ ಬಳಿಗೆ ದಾಖಲೆ ಕಳಿಸಿ. ನಾನೇ ಲೆಕ್ಕ ಪರಿಶೀಲಿಸುತ್ತೇನೆ. ಸರ್ಕಾರ ಪಾರದರ್ಶಕವಾಗಿದ್ದರೆ ಲೆಕ್ಕ ಕೊಡಬೇಕು.ಇದನ್ನು ಇಲ್ಲಿಗೇ ಬಿಡುವುದಿಲ್ಲ. ಲಾಜಿಕಲ್ ಎಂಡ್ಗೆ ತೆಗೆದು ಕೊಂಡು ಹೋಗುತ್ತೇವೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ
Please follow and like us: