ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಮೊದಲೇ 7ನೇ ವೇತನ ಆಯೋಗ

ದಾವಣಗೆರೆ: ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಮೊದಲೇ 7ನೇ ವೇತನ ಆಯೋಗದ ವರದಿ ಪಡೆದು ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಲಾಗುವುದು ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಡಾ.ವೈ.ಎ. ನಾರಾಯಣಸ್ವಾಮಿ ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ಶನಿವಾರ ನಡೆದ ಕರ್ನಾಟಕ ರಾಜ್ಯ ಪ್ರೌಢಶಾಲೆ ಸಹ ಶಿಕ್ಷಕರ ಸಂಘದ ಜಿಲ್ಲಾ ಪದಾಧಿಕಾರಿಗಳ ಸೇವಾ ಸ್ವೀಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.

ಬಿಜೆಪಿ ಸರ್ಕಾರ ಶಿಕ್ಷಕರ ಪರವಾಗಿದ್ದು, ಐದು ಮತ್ತು ಆರನೇ ವೇತನ ಆಯೋಗಗಳನ್ನು ಬಿಜೆಪಿ ಸರ್ಕಾರ ಜಾರಿ ಮಾಡಿತ್ತು. ಈಗಲೂ ನಮ್ಮ ಸರ್ಕಾರ ಇದ್ದು, ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಶೀಘ್ರವೇ ಸಿಗಲಿದೆ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ 7ನೇ ವೇತನ ಆಯೋಗ ವರದಿ ಪಡೆದು ಬಜೆಟ್ ನಲ್ಲಿ ಘೋಷಣೆ ಮಾಡುವಂತೆ ಮನವಿ ಮಾಡುತ್ತೇವೆ. ವೇತನ, ಭತ್ಯೆ ಹೆಚ್ಚಳದಿಂದ ರಾಜ್ಯದ ಸರ್ಕಾರಿ ನೌಕರರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಶೀಘ್ರದಲ್ಲೇ ಅಡುಗೆ ಎಣ್ಣೆ ಬೆಲೆ ಹೆಚ್ಚಳ!

Sun Feb 12 , 2023
    ನವದೆಹಲಿ : ಈಗ ಖಾದ್ಯ ತೈಲದ ಬೆಲೆಯಲ್ಲಿ ಮತ್ತೆ ಗಲಾಟೆ ಶುರುವಾಗಿದ್ದು, ಇದೀಗ ದೇಶದಲ್ಲಿ ಖಾದ್ಯ ತೈಲದ ಮೇಲಿನ ಆಮದು ಸುಂಕವನ್ನ ಕೇಂದ್ರ ಹಿಂಪಡೆಯುವ ಸಾಧ್ಯತೆ ಇದೆಯಂತೆ. ಕಳೆದ 6 ತಿಂಗಳುಗಳಲ್ಲಿ ಜಾಗತಿಕ ಪ್ರವೃತ್ತಿಗೆ ಅನುಗುಣವಾಗಿ ಭಾರತದಲ್ಲಿ ಖಾದ್ಯ ತೈಲ ಬೆಲೆಗಳು ಕುಸಿದಿರುವುದರಿಂದ, ಸರ್ಕಾರವು ಈಗ ಅವರ ಆಮದು ಸುಂಕದ ಮೇಲಿನ ವಿನಾಯಿತಿಯನ್ನ ಹಿಂಪಡೆಯಬಹುದು. ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಖಾದ್ಯ ತೈಲದ ಮೇಲಿನ ಆಮದು ಸುಂಕವನ್ನ ಕಡಿಮೆ […]

Advertisement

Wordpress Social Share Plugin powered by Ultimatelysocial