ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕಲಿಕೆ : ಅಶ್ವತ್ಥನಾರಾಯಣ

ಬೆಂಗಳೂರು: ಮಲ್ಲೇಶ್ವರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನ ಬಳಕೆ ಮೂಲಕ ಇ-ಲರ್ನಿಂಗ್ ವ್ಯವಸ್ಥೆ ಸಾಧ್ಯವಾಗಿಸುವ ಜತೆಗೆ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಒತ್ತು ನೀಡುವ ವ್ಯವಸ್ಥೆ ಜಾರಿ‌ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಕಲಿಕೆಯ ಗುಣಮಟ್ಟ ಸುಧಾರಿಸುವ ಸಂಬಂಧ ಶಿಕ್ಷಣ ತಜ್ಞರ ಜತೆ ಇಂದು ಸಮಾಲೋಚನೆ ನಡೆಸಿದ ನಂತರ  ಮಾತನಾಡಿದರು. ಮಲ್ಲೇಶ್ವರದ 11 ಕ್ಯಾಂಪಸ್‌ಗಳಲ್ಲಿರುವ ಒಟ್ಟು 22 ಸರ್ಕಾರಿ ಶಾಲೆಗಳಲ್ಲಿ ಬೋಧನಾ ವಿಧಾನದಲ್ಲಿ ಬದಲಾವಣೆ ತರುವ ಮೂಲಕ ಮಕ್ಕಳ ಕಲಿಕೆಯನ್ನು ಸುಧಾರಿಸುವ ಸಂಬಂಧ ಶಿಕ್ಷಣ ತಜ್ಞರ ಜತೆ ಸಮಾಲೋಚನೆ ನಡೆಸಲಾಯಿತು. ಸರ್ಕಾರಿ ಶಾಲೆಗಳ ಕಲಿಕಾ ಗುಣಮಟ್ಟ‌ ಯಾವುದೇ ಖಾಸಗಿ ಶಾಲೆಯ ಕಲಿಕೆಯ ಗುಣಮಟ್ಟಕ್ಕಿಂತ ಕಡಿಮೆ ಇರಬಾರದು. ಈ ನಿಟ್ಟಿನಲ್ಲಿ ತಂತ್ರಜ್ಞಾನದ ಬಳಕೆಗೆ ಒತ್ತು ನೀಡಲಾಗುವುದು. ಈ ಮೂಲಕ ಮಕ್ಕಳನ್ನು ಆಕರ್ಷಿಸಿ ಸರ್ಕಾರಿ ಶಾಲೆಗಳಲ್ಲಿ ಪ್ರವೇಶಾತಿಯನ್ನು ಹೆಚ್ಚಿಸುವುದು ನಮ್ಮ ಉದ್ದೇಶ ಎಂದು ತಿಳಿಸಿದರು.

Please follow and like us:

Leave a Reply

Your email address will not be published. Required fields are marked *

Next Post

ರಂಜಾನ್ ಪ್ರಯುಕ್ತ  ಅಹಾರ  ಕಿಟ್ ವಿತರಣೆ

Mon May 25 , 2020
ದೇವದುರ್ಗ : ರಂಜಾನ್ ಹಬ್ಬದ ಪ್ರಯುಕ್ತ ದೇವದುರ್ಗ ತಾಲೂಕಿನ ಜಾಲಹಳ್ಳಿಯಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ಖುರ್ಷಿದ್ ಪಾಟೀಲ್ ಬಡವರಿಗೆ ಆಹಾರ ಕಿಟ್ ವಿತರಿಸಿ, ಮಾತನಾಡಿದರು.  ವೈದ್ಯಾಧಿಕಾರಿ ಡಾಕ್ಟರ್ ಆರ್ ಎಸ್ ಹುಲಿಮನಿ ಅವರು ಮಾತನಾಡಿ ಕೊರೊನಾ ವೈರಸ್ ದೇಶಾದ್ಯಂತ ವೇಗವಾಗಿ ಹರಡುತ್ತಿದ್ದು ಜನರನ್ನು ತಲ್ಲಣಗೊಳಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಬಡ ಜನರಿಗೆ ದುಡಿಯಲು ಕೆಲಸವಿಲ್ಲದೆ, ಒಪತ್ತಿನ ಗಂಜಿಗೂ ಕಷ್ಟ ಪಡುವಂತಾಗಿದೆ. ದುಡಿಯುವ ಕೈಗಳನ್ನು  ಕೊರೊನಾ ಕಟ್ಟಿ ಹಾಕಿದೆ. ಹೀಗಾಗಿ ಇಂತಹವರ ಕಷ್ಟ […]

Advertisement

Wordpress Social Share Plugin powered by Ultimatelysocial