ಸರ್ಕಾರ ಎಲ್ಲ ಹಂತದಲ್ಲಿಯೂ ಕೃಷಿಕರ ಜೊತೆ ಇದೆ:ಬಿಸಿ ಪಾಟೀಲ್

ರಾಜ್ಯದ ಕೃಷಿಕರಿಗೆ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಸರ್ಕಾರ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸುತ್ತಿದೆ ಎಂದು ಸಚಿವ ಬಿ.ಸಿ. ಪಾಟೀಲ್  ಹೇಳಿದ್ದಾರೆ. ಮಡಿಕೇರಿಯಲ್ಲಿ ಮಾತನಾಡಿದ ಅವರು, ಆತ್ಮಹತ್ಯೆಗಳನ್ನು ತಡೆಗಟ್ಟುವ ದಿಶೆಯಲ್ಲಿ ರೈತ.ರಿಗೆ ಆನುಕೂಲಕರವಾದ ಯೋಜನೆಗಳನ್ನು ರೂಪಿಸಿ ಅನುಷ್ಠಾನ ಮಾಡಲಾಗಿದೆ. ರಾಜ್ಯ ಸರ್ಕಾರ ಎಲ್ಲ ಹಂತಗಳಲ್ಲಿಯೂ ಕೃಷಿಕರ ಜೊತೆ ಇದೆ. ಈಗಾಗಲೇ ಕೇಂದ್ರ ಸರ್ಕಾರ ಕಿಸಾನ್ ಸಮ್ಮಾನ್ ಯೋಜನೆಯಡಿ ಪ್ರತಿ ಕಂತಿನಲ್ಲಿ ಎರಡು ಸಾವಿರ ರೂಪಾಯಿಗಳಂತೆ ಐದು ಕಂತುಗಳ ಹಣವನ್ನು ನೇರವಾಗಿ ರೈತರ ಖಾತೆಗಳಿಗೆ ವರ್ಗಾವಣೆ ಮಾಡಿದೆ. ರಾಜ್ಯ ಸರ್ಕಾರವೂ ತನ್ನ ಪಾಲಿನ ಹಣ ನೀಡಿದೆ. ಬಡ್ಡಿ ರಹಿತ ಸಾಲದ ಅವಧಿ ಇದೇ ವರ್ಷದ ಮಾರ್ಚ್ ತಿಂಗಳಿಗೆ ಮುಕ್ತಾಯವಾಗಬೇಕಿತ್ತು. ರೈತರ ಹಿತದೃಷ್ಟಿಯಿಂದ ಅದನ್ನು ಜೂನ್ ತಿಂಗಳ ತನಕ ವಿಸ್ತರಣೆ ಮಾಡಲಾಗಿದೆ. ರಾಷ್ಟ್ರಾದ್ಯಂತ ಕೊರೊನಾ  ಕಾರಣ ಲಾಕ್ ಡೌನ್ ಇದ್ದರೂ ಕೃಷಿ ಚಟುವಟಿಕೆ ನಿಲ್ಲದಂತೆ ನೋಡಿಕೊಳ್ಳಲಾಗಿದೆ. ಕೃಷಿ ಉತ್ಪನ್ನಗಳ ಸಾಗಣೆಗಾಗಿ ಅಂತರ ಜಿಲ್ಲೆ, ಅಂತರ ರಾಜ್ಯಗಳ ನಿರ್ಬಂಧ ಸಡಿಲಿಕೆ ಮಾಡಲಾಗಿದೆ ಎಂದು ಹೇಳಿದರು

Please follow and like us:

Leave a Reply

Your email address will not be published. Required fields are marked *

Next Post

ಗ್ರಾಮ ಪಂಚಾಯಿತಿ ಚುನಾವಣೆ ಮುಂದೂಡಿಕೆ…!

Wed May 6 , 2020
ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಮುಂದೂಡಲು ಚುನಾವಣಾ ಆಯೋಗಕ್ಕೆ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ ತಿಂಗಳಲ್ಲಿ ಪಂಚಾಯಿತಿ ಚುನಾವಣೆ ನಡೆಯಬೇಕಿತ್ತು. ಕೊರೊನಾ ಹಿನ್ನೆಲೆಯಲ್ಲಿ ಮುಂದೂಡುವ ತೀರ್ಮಾನ ಕೈಗೊಳ್ಳಲಾಗಿದೆ. ಹಾಗಾಗಿ ಗ್ರಾಮ ಪಮಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸಬೇಕೊ ಅಥವಾ ಆಡಳಿತ ಸಮಿತಿ ರಚಿಸಬೇಕೋ ಎಂಬ ಚರ್ಚೆ ನಡೆಯುತ್ತಿದೆ. ಗ್ರಾಮ ಪಂಚಾಯಿತಿ ಚುನಾವಣೆ ಮುಂದೂಡಿಕೆಗೆ ಸಂಬಂಧಿಸಿದಂತೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ […]

Advertisement

Wordpress Social Share Plugin powered by Ultimatelysocial