ರಾಜ್ಯದ ಕೃಷಿಕರಿಗೆ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಸರ್ಕಾರ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸುತ್ತಿದೆ ಎಂದು ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ಮಡಿಕೇರಿಯಲ್ಲಿ ಮಾತನಾಡಿದ ಅವರು, ಆತ್ಮಹತ್ಯೆಗಳನ್ನು ತಡೆಗಟ್ಟುವ ದಿಶೆಯಲ್ಲಿ ರೈತ.ರಿಗೆ ಆನುಕೂಲಕರವಾದ ಯೋಜನೆಗಳನ್ನು ರೂಪಿಸಿ ಅನುಷ್ಠಾನ ಮಾಡಲಾಗಿದೆ. ರಾಜ್ಯ ಸರ್ಕಾರ ಎಲ್ಲ ಹಂತಗಳಲ್ಲಿಯೂ ಕೃಷಿಕರ ಜೊತೆ ಇದೆ. ಈಗಾಗಲೇ ಕೇಂದ್ರ ಸರ್ಕಾರ ಕಿಸಾನ್ ಸಮ್ಮಾನ್ ಯೋಜನೆಯಡಿ ಪ್ರತಿ ಕಂತಿನಲ್ಲಿ ಎರಡು ಸಾವಿರ ರೂಪಾಯಿಗಳಂತೆ ಐದು ಕಂತುಗಳ ಹಣವನ್ನು ನೇರವಾಗಿ ರೈತರ ಖಾತೆಗಳಿಗೆ ವರ್ಗಾವಣೆ ಮಾಡಿದೆ. ರಾಜ್ಯ ಸರ್ಕಾರವೂ ತನ್ನ ಪಾಲಿನ ಹಣ ನೀಡಿದೆ. ಬಡ್ಡಿ ರಹಿತ ಸಾಲದ ಅವಧಿ ಇದೇ ವರ್ಷದ ಮಾರ್ಚ್ ತಿಂಗಳಿಗೆ ಮುಕ್ತಾಯವಾಗಬೇಕಿತ್ತು. ರೈತರ ಹಿತದೃಷ್ಟಿಯಿಂದ ಅದನ್ನು ಜೂನ್ ತಿಂಗಳ ತನಕ ವಿಸ್ತರಣೆ ಮಾಡಲಾಗಿದೆ. ರಾಷ್ಟ್ರಾದ್ಯಂತ ಕೊರೊನಾ ಕಾರಣ ಲಾಕ್ ಡೌನ್ ಇದ್ದರೂ ಕೃಷಿ ಚಟುವಟಿಕೆ ನಿಲ್ಲದಂತೆ ನೋಡಿಕೊಳ್ಳಲಾಗಿದೆ. ಕೃಷಿ ಉತ್ಪನ್ನಗಳ ಸಾಗಣೆಗಾಗಿ ಅಂತರ ಜಿಲ್ಲೆ, ಅಂತರ ರಾಜ್ಯಗಳ ನಿರ್ಬಂಧ ಸಡಿಲಿಕೆ ಮಾಡಲಾಗಿದೆ ಎಂದು ಹೇಳಿದರು
ಸರ್ಕಾರ ಎಲ್ಲ ಹಂತದಲ್ಲಿಯೂ ಕೃಷಿಕರ ಜೊತೆ ಇದೆ:ಬಿಸಿ ಪಾಟೀಲ್
Please follow and like us: