ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರ ನಿಯಂತ್ರಣಕ್ಕಾಗಿ ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೋಕಿನ ಕವಿತಾಳ್ ಪಟ್ಟಣದಲ್ಲಿ ಟಾಸ್ಕ್ ಫೋರ್ಸ್ ಬ್ಲೋಕ್ ಲೇವಲ್ ಕಮಿಟಿ ನಿರ್ಮಾಣ ಮಾಡಲು ಪೂರ್ವ ಭಾವಿ ಸಭೆ ಹಮ್ಮಿಕೊಳ್ಳಲಾಯಿತು. ಸಭೆಯಲ್ಲಿ ಮಾತನಾಡಿದ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿಯಾದ ಸ್ವಾತಿ ದರಗಿ, ಕೊರೊನಾ ನಿಯಂತ್ರಣ ಮಾಡುವಲ್ಲಿ ಸಾರ್ವಜನಿಕರ ಪಾತ್ರ ಅತಿಮುಖ್ಯ. ಸಮುದಾಯದ ಎಲ್ಲಾ ಜನರು ಸಹಕಾರ ಕೂಡ ಅಷ್ಟೇ ಅಗತ್ಯವಾಗಿರುತ್ತದೆ ಎಂದು ಹೇಳಿದರು.
ಇದೇ ವೇಳೆ ಮಾತನಾಡಿದ ಡಾ,//ಹಿರಾಬಾಯಿಯವರು ಅನಗತ್ಯ ವಾದ ಸಭೆ ಸಮಾರಂಭಗಳಲ್ಲಿ ಸೇರಬೇಡಿ. ಹೊರಗಿನ ಆಹಾರವನ್ನು ಸೇವಿಸಬೇಡಿ ,ಅದಷ್ಟು ಮನೆಯಲ್ಲಿ ತಯಾರಿಸಿದ ಆಹಾರವನ್ನು ಸೇವಿಸಿ. ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಿ. ಎಂದು ಹೇಳಿದರು.