ಸಾರ್ವತ್ರಿಕ ವರ್ಗಾವಣೆಗೆ ಬ್ರೇಕ್

ರಾಜ್ಯದಲ್ಲಿ ಕೊರೊನಾ ಅಬ್ಬರಿಸುತ್ತಿದ್ದು, ಇದರಿಂದಾಗಿ ಲಾಕ್‌ ಡೌನ್‌ ಘೋಷಣೆ ಮಾಡಲಾಗಿತ್ತು. ಇದರ ಪರಿಣಾಮ ಸರ್ಕಾರಕ್ಕೆ ಆದಾಯದ ಕೊರತೆಯಾಗಿದ್ದು ಮಿತವ್ಯಯ ಸಾಧಿಸುವ ಉದ್ದೇಶದಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ. ಅದೇನೆಂದರೆ ಸರ್ಕಾರಿ ನೌಕರರಿಗೆ ವರ್ಗಾವಣೆ ಪ್ರಕ್ರಿಯೆ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ಸುದ್ದಿಯೊಂದನ್ನು ನೀಡಿದೆ. ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಬ್ರೇಕ್‌ ಹಾಕಲಾಗಿದ್ದು, ವಿಶೇಷ ಪ್ರಕರಣಗಳಲ್ಲಿ ಮುಖ್ಯಮಂತ್ರಿಗಳ ಅನುಮೋದನೆ ಮೇರೆಗೆ ಸರ್ಕಾರಿ ನೌಕರರ ವರ್ಗಾವಣೆ ಮಾಡಬಹುದೆಂದು ತಿಳಿಸಲಾಗಿದೆ. ಅಲ್ಲದೇ ಬಹಳಷ್ಟು ಸರ್ಕಾರಿ ನೌಕರರು ಕೋವಿಡ್‌ 19 ಕಾರ್ಯಗಳಲ್ಲಿ ತೊಡಗಿದ್ದು, ವರ್ಗಾವಣೆಯಿಂದ ಆ ಕೆಲಸ ಕಾರ್ಯಗಳಿಗೆ ತೊಂದರೆಯಾಗುತ್ತದೆಂಬ ಕಾರಣಕ್ಕೆ ಈ ನಿರ್ಧಾರಕ್ಕೆ ಬರಲಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು

Fri Jun 19 , 2020
ಬೆಂಗಳೂರಿನ ಬಸವನಗುಡಿಯ ನೆಟ್ಟಕಲ್ಲಪ್ಪ ಸರ್ಕಲ್ ಬಳಿ ಇರುವ ಗುರುರಾಘವೇಂದ್ರ ಸೌಹಾರ್ದ ಕೋಆಪರೇಟಿವ್ ಸೊಸೈಟಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸಿಬಿ ಡಿವೈಎಸ್ಪಿ ತಮ್ಮಯ್ಯ ಮತ್ತು ಖಾನ್ ನೇತೃತ್ವದ ತಂಡದಿAದ ಈ ದಾಳಿ ನಡೆದಿದ್ದು ಗುರುರಾಘವೇಂದ್ರ ಕೋಆಪರೇಟಿವ್ ಸೊಸೈಟಿಯ ಮುಖ್ಯ ಕಚೇರಿ ಮತ್ತು ಬ್ಯಾಂಕ್ ನಲ್ಲಿದ್ದ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬರೋಬ್ಬರಿ ೧೪೦೦ ಕೋಟಿಗಳ ಅವ್ಯವಹಾರದ ಆರೋಪಗಳು ಗುರುರಾಘವೇಂದ್ರ ಕೋಆಪರೇಟಿವ್ ಸೊಸೈಟಿ ವಿರುದ್ದ ಕೇಳಿ ಬಂದಿತ್ತು ಅಲ್ಲದೇ ಮೋಸಹೋದ ನೂರಾರು […]

Advertisement

Wordpress Social Share Plugin powered by Ultimatelysocial