ರಾಜ್ಯದಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹೆಚ್ಚುತ್ತಿದ್ದು, ಜನತೆ ತತ್ತರಿಸಿದ್ದಾರೆ. ಇದೀಗ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೂ ಮಾರಕ ಕೊರೊನಾ ಸೋಂಕು ಭೀತಿ ಎದುರಾಗಿದೆ. ಈ ಕುರಿತು ಸಿಎಂ ತಮ್ಮ ಕಾರ್ಯಕ್ರಮಗಳಿಂದ ದೂರ ಉಳಿದು ಮನೆಯಲ್ಲೇ ಉಳಿದಿದ್ದಾರೆ. ಸಿಎಂ ಯಡಿಯೂರಪ್ಪ ಅವರ ಬೆಂಗಾವಲು ಪಡೆಯ ವಾಹನವೊಂದರ ಚಾಲಕನಿಗೆ ಸೋಂಕು ತಗುಲಿದ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೂ ಸೋಂಕು ಭೀತಿ ಶುರುವಾಗಿದೆ. ಹೀಗಾಗಿ ಅವರ ಸಂಪರ್ಕಕ್ಕೆ ಬಂದಿರುವ ಎಲ್ಲರನ್ನು ಕ್ವಾರಂಟೈನ್ ಮಾಡಲಾಗಿದೆ. ಹಾಗೂ ಸಿಎಂ ಯಡಿಯೂರಪ್ಪ ಅವರಿಗೂ ಸೋಂಕು ಭೀತಿ ಎದುರಾಗಿದ್ದು, ಮನೆಯಲ್ಲೇ ತಂಗಿದ್ದಾರೆ. ಅಧಿಕೃತವಾಗಿ ಯಾವುದೇ ಸಿಎಂ ಕಾರ್ಯಕ್ರಮಗಳು ರದ್ದಾಗಿಲ್ಲ. ಆದರೂ ಸಿಎಂ ಮನೆಯಲ್ಲೇ ಉಳಿದಿದ್ದಾರೆ.