ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪರವರ ನೇತೃತ್ವದಲ್ಲಿ ಕೋವಿಡ್ ಕೇರ್ ಸೆಂಟರ್ ನಿರ್ವಹಣೆ ಕುರಿತಾದ ತುರ್ತು ಸಭೆ ನಡೆಸಿದರು. ಸಭೆಯಲ್ಲಿ ಮಾನ್ಯ ಉಪಮುಖ್ಯಮಂತ್ರಿಗಳಾದ ಅಶ್ವಥ್ ನಾರಾಯಣ್ ಸಚಿವರಾದ ಸುಧಾಕರ್ ರಾಜಕೀಯ ಕಾರ್ಯದರ್ಶಿಗಳಾದ ವಿಶ್ವನಾಥ್ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
Please follow and like us:
Wed Jul 8 , 2020
ಭಾರತದಲ್ಲಿ ಮಾರಕ ಕೊರೊನಾ ವೈರಸ್ ನ ಅಟ್ಟಹಾಸ ಮುಂದುವರೆದಿದೆ. ಬುಧವಾರ 22,752 ಜನರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, ಈ ಮೂಲಕ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7,42,417ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 486 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ಒಟ್ಟು ಕೊರೊನಾಗೆ ಬಲಿಯಾದವರ ಸಂಖ್ಯೆ 20,642ಕ್ಕೆ ಏರಿಕೆಯಾಗಿದೆ. ಈ ಪೈಕಿ 4,56,831 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಇನ್ನೂ 2,64,944 ಕೊರೊನಾ ವೈರಸ್ ಪ್ರಕರಣಗಳು ಸಕ್ರಿಯವಾಗಿದೆ. […]