ಸಿಎಂ ಬಿಎಸ್ವೈಮೌಖಿಕ ಅನುಮತಿ ನೀಡಿದ್ದಾರೆ

ಕೆಪಿಸಿಸಿ ಅಧ್ಯಕ್ಷರ ಪದಗ್ರಹಣಕ್ಕೆ ಸಿಎಂ ಯಡಿಯೂರಪ್ಪ ಮೌಖಿಕ ಅನುಮತಿ ಕೊಟ್ಟಿದ್ದಾರೆ. ಆದರೆ ಸರ್ಕಾರದಿಂದ ಅಧಿಕೃತ ಆದೇಶ ಸಿಕ್ಕ ಬಳಿಕ ಕಾರ್ಯಕ್ರಮ ಆಯೋಜನೆಯ ದಿನಾಂಕ ನಿಗದಿ ಮಾಡುತ್ತೇವೆ ಎಂದು ಸಂಸದ ಡಿ.ಕೆ. ಸುರೇಶ್ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಅನುಮತಿ ಹಿನ್ನೆಲೆ ಕಾರ್ಯಕ್ರಮದ ದಿನಾಂಕ ನಿಗದಿಪಡಿಸಿ ಆಚರಿಸುತ್ತೇವೆ .ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಪದಗ್ರಹಣಕ್ಕೆ ನಮ್ಮ ಅಭ್ಯಂತರವಿಲ್ಲ ಎಂಬ ಸಿಎಂ ಬಿಎಸ್​ವೈ ಹೇಳಿಕೆ ಸಂತಸ ತಂದಿದೆ. ನಮ್ಮ ಅರ್ಜಿಗೆ ಸಹಮತಿ ಅನುಮತಿ ಕೊಟ್ಟರೆ ಒಳ್ಳೆಯದು. ಸಂವಿಧಾನ ಉಲ್ಲಂಘಿಸೋದು ಬೇಡ ಅಂತ ಮೂರನೇ ಬಾರಿ ಅರ್ಜಿ ಸಲ್ಲಿಸಿದ್ವಿ. ಅವರು ಅನುಮತಿ ಕೊಟ್ಟರೆ ದಿನಾಂಕ ನಿಗದಿ ಮಾಡಿ ಕಾರ್ಯಕ್ರಮ ಆಯೋಜಿಸುತ್ತೇವೆ ಎಂದರು.ಸರ್ಕಾರ ಬಾಯಿ ಮಾತಲ್ಲಿ ಹೇಳಿದ್ರೆ ನಡೆಯುತ್ತಾ? ಬಾಯಿ ಮಾತಲ್ಲಿ ಹೇಳೋದು ಎಷ್ಟು ಸರಿ? ಹೇಳಿಕೆ ಬೇರೆ ಸರ್ಕಾರಿ ಅಧಿಕೃತ ಆದೇಶ ಬೇರೆ. ಸರ್ಕಾರದ ಸೂಚನೆ ಪಾಲನೆ ಮಾಡಲು ನಾವು ಸಿದ್ಧರಿದ್ದೇವೆ ಎಂದು ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಸಾರಿಗೆ ಸಿಬ್ಬಂದಿಗಳಿಗೆ ಗುಡ್ ನ್ಯೂಸ್

Fri Jun 12 , 2020
ಸಾರಿಗೆ ಸಿಬ್ಬಂದಿಗಳಿಗೆ ಮೇ ತಿಂಗಳ ಪೂರ್ಣ ವೇತನ ಬಿಡುಗಡೆ ಮಾಡಿರುವುದಾಗಿ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, KSRTC, BMTC, NWKRTC, NEKRTC ಈ ನಾಲ್ಕೂ ಸಾರಿಗೆ ಸಂಸ್ಥೆಗಳ ಸಿಬ್ಬಂದಿಗಳಿಗೆ ಮೇ ತಿಂಗಳ ವೇತನವನ್ನು ನೀಡುವುದಕ್ಕಾಗಿ ಅಗತ್ಯವಿದ್ದ 325.01 ಕೋಟಿ ರೂ.ಗಳನ್ನು ಇಂದು ರಾಜ್ಯ ಸರ್ಕಾರ ಬಿಡುಗಡೆಗೊಳಿಸಿದೆ. ಕೊರೊನಾ ಹಿನ್ನೆಲೆಯಲ್ಲಿ ಘೋಷಿಸಿದ್ದ ಲಾಕ್‍ಡೌನ್‍ನಿಂದಾಗಿ ಸಾರಿಗೆ ಸಂಸ್ಥೆಗಳು ಅಪಾರ ನಷ್ಟ ಅನುಭವಿಸಿದ್ದರಿಂದ ಸಿಬ್ಬಂದಿಗಳಿಗೆ ವೇತನ ನೀಡಲು ಸರ್ಕಾರ […]

Advertisement

Wordpress Social Share Plugin powered by Ultimatelysocial