ಸಿಎಂ ಬಿಎಸ್‌ವೈ ವಿರುದ್ಧ ಉಗ್ರಪ್ಪ ಗರಂ

ರಾಜ್ಯ ಸರ್ಕಾರ ಈಗ ಜನ ಹಾಗೂ ರೈತ ವಿರೋಧಿಯಾಗಿ ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ಮುಂದಾಗಿದೆ ಎಂದು ಮಾಜಿ ಸಂಸದ ವಿ ಎಸ್ ಉಗ್ರಪ್ಪ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜನ ಬದುಕಿನ ಜತೆ ಹೋರಾಡುತ್ತಿದ್ದಾರೆ. ಆದರೆ, ಬಿಜೆಪಿ ಪಕ್ಷ ಹಾಗೂ ಮುಖಂಡು ಜನರ ಸಮಸ್ಯೆಗೆ ಸ್ಪಂದಿಸದೆ ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ಮುಂದಾಗಿದ್ದಾರೆ. ಸಿಎಂ ನಾಚಿಕೆಗೇಡಿನ ಹೇಳಿಕೆ ನೀಡುತ್ತಿದ್ದಾರೆ. ಜನಪರ, ರೈತಪರ ಕಾಯ್ದೆಯನ್ನು ತಿದ್ದಲು ಹೋದ್ರೆ ನಿಮ್ಮ ಅಧಿಕಾರ ಕಳೆದುಕೊಳ್ಳುವ ದಿನ ಹೆಚ್ಚು ದೂರವಿಲ್ಲ ಎಂದರು. ಸರ್ಕಾರ ಕಾನೂನು ತಿದ್ದುಪಡಿ ಮೂಲಕ ತಮಗೆ ಹಾಗೂ ತಮ್ಮ ಬೆಂಬಲಿಗರಿಗೆ ಹಾಗೂ ಈಗಾಗಲೇ ಸಾಕಷ್ಟು ಉಳ್ಳವರಿಗೆ ಇನ್ನಷ್ಟು ಭೂಮಿ ಒದಗಿಸಿಕೊಡುವ ಕಾರ್ಯ ಮಾಡಲು ಮುಂದಾಗಿದೆ. ಕೊರೊನಾ ಆತಂಕದ ನಡುವೆ ರಾಜ್ಯ ಸರ್ಕಾರ ಜನರ ಸಮಸ್ಯೆಯ ಬದಲು ತನ್ನ ಸ್ವಾರ್ಥ ಸಾಧನೆಗೆ ಒಂದಾಗಿದೆ. ಇದನ್ನು ಖಂಡಿಸಿ ನಾವು ರಾಜ್ಯಾದ್ಯಂತ ಜನಜಾಗೃತಿ ಹಾಗೂ ಪ್ರತಿಭಟನಾ ಕಾರ್ಯಕ್ರಮ ಹಮ್ಮಿಕೊಳ್ಳುತ್ತೇವೆ ಎಂದು ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಅಪಘಾತಕ್ಕೀಡಾದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ ಮಾಜಿ ಡಿಸಿಎಂ

Sun Jun 14 , 2020
ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಮಾರ್ಗಮಧ್ಯೆ ಅಪಘಾತದಲ್ಲಿ ಗಾಯಗೊಂಡು ನರಳುತ್ತಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆ ಮಾಡುವ ಮೂಲಕ ಮಾನವೀಯತೆ ತೋರಿದ್ದಾರೆ. ಅಪಘಾತಕ್ಕೀಡಾದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ ಮಾಜಿ ಡಿಸಿಎಂ ಪರಮೇಶ್ವರ್ ನಿನ್ನರ ರಾತ್ರಿ ಕೊರಟಗೆರೆಯಿಂದ ಬೆಂಗಳೂರಿಗೆ ಡಾ. ಪರಮೇಶ್ವರ್ ಕಾರಿನ ಮೂಲಕ ತೆರಳುತ್ತಿದ್ದರು. ಇದೇ ವೇಳೆ ಭೈರಗೊಂಡ್ಲು ಗ್ರಾಮದ ಹರೀಶ್ ಎಂಬುವರು ಅಪಘಾತಕ್ಕೆ ಒಳಗಾಗಿದ್ದರು. ಕೋಳಾಲ ಗ್ರಾಮದ ಸಮೀಪ ಅಪಘಾತವಾಗಿದ್ದನ್ನು ಕಂಡು ವಾಹನ ನಿಲ್ಲಿಸಿದ ಅವರು, ಕೋಲಾಳ […]

Advertisement

Wordpress Social Share Plugin powered by Ultimatelysocial