ಸಿಎಂ ಬಿ.ಎಸ್.ವೈಗೆ, ಸಿದ್ದರಾಮಯ್ಯ ಪತ್ರ

ಜಾನುವಾರುಗಳು ಸತ್ತಾಗ 10000 ರೂಪಾಯಿವರೆಗೆ ಪರಿಹಾರ ನೀಡುವ ಅನುಗ್ರಹ ಯೋಜನೆಯನ್ನು ಹಣದ ಕೊರತೆಯ ನೆಪಹೇಳಿ ನಿಲ್ಲಿಸಬಾರದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಸಿಎಂ ಬಿ.ಎಸ್.ಯಡಿಯೂರಪ್ಪಗೆ ಪತ್ರ ಬರೆದಿರುವ ಅವರು, ಅನುಗ್ರಹ ಯೋಜನೆಗೆ ಅವಶ್ಯಕ ಅನುದಾನ ಒದಗಿಸಿ ಜಾನುವಾರು ಕಳೆದುಕೊಂಡ ರೈತರಿಗೆ ಪರಿಹಾರ ನೀಡಬೇಕು. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಮೇಣಗುಡ್ಡದ ಬಳಿ ಕರಬೂಜ ಹಣ್ಣು ಹಾಗೂ ಬಳ್ಳಿಯನ್ನು ತಿಂದು ರಾಮಕೃಷ್ಣಪ್ಪ ಎಂಬ ಕುರಿಗಾರರಿಗೆ ಸೇರಿದ ಸುಮಾರು 60 ಕುರಿಗಳು ಸತ್ತಿವೆ. ಈ ರೀತಿಯ ಪ್ರಕರಣಗಳು ರಾಜ್ಯಾದ್ಯಂತ ಸಂಭವಿಸುತ್ತಿವೆ. ಇದರಿಂದ ಪಶುಪಾಲಕರು ತೀವ್ರ ರೀತಿಯ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಈ ಯೋಜನೆಗೆ ನೂರಾರು ಕೋಟಿ ರೂ.ಅನುದಾನದ ಅವಶ್ಯಕತೆಯೂ ಇರುವುದಿರುವುದರಿಂದ ಯಾವುದೇ ಕಾರಣಕ್ಕೂ ಅನುಗ್ರಹ ಯೋಜನೆಯನ್ನು ನಿಲ್ಲಿಸಿ ಪಶುಪಾಲಕರ ವಿರೋಧಿ ನಿಲುವನ್ನು ಸರ್ಕಾರ ತೆಗೆದುಕೊಳ್ಳಬಾರದು ಎಂದು ಹೇಳಿದ್ದಾರೆ.

 

Please follow and like us:

Leave a Reply

Your email address will not be published. Required fields are marked *

Next Post

ಕಿಮ್ ಜಾಂಗ್ ಉನ್ ಕ್ಷೇಮ: ಅಮೇರಿಕಾ ಅಧ್ಯಕ್ಷ ಟ್ರಂಪ್

Tue Apr 28 , 2020
ಅಮೆರಿಕ: ಉತ್ತರ ಕೊರಿಯಾದ ಕ್ರೂರಿ ದೊರೆ ಕಿಮ್ ಜಾಂಗ್ ಉನ್ ಆನಾರೋಗ್ಯ ಹಿನ್ನಲೆ ಕಿಮ್ ಕ್ಷೇಮವಾಗಿದ್ದಾರೆ ಎಂದು ಅಮೆರಿಕಾ ಅಧ್ಯಕ್ಷ ಟ್ರಂಪ್ ಹೇಳಿದ್ದಾರೆ..ಈ ಟ್ರಂಪ್ ಹೇಳಿಕೆ ಎಲ್ಲಾ ಊಹಾಪೋಹಕ್ಕೆ ತೆರೆ ಎಳೆದಂತಾಗಿದೆ. ಅವರ ಆರೋಗ್ಯದ ಬಗ್ಗೆ ನನಗೆ ತುಂಬಾ ಒಳ್ಳೆಯ ಮಾಹಿತಿ ಇದೆ. ಆದರೆ ಅದರ ಬಗ್ಗೆ ನಾನು ಈಗ ಮಾತನಾಡಲು ಸಾಧ್ಯವಿಲ್ಲ ಆತನಿಗೆ ಒಳ್ಳೆಯದಾಗಲಿ ಎಂದು ಶುಭಹಾರೈಸುವೆ ಅಷ್ಟೇ, ಎಂದು ಶ್ವೇತಭವನದ ಪತ್ರಿಕಾಗೋಷ್ಠಿಯಲ್ಲಿ ಟ್ರಂಪ್ ಹೇಳಿದ್ರು. ಕಿಮ್ ಜಾಂಗ್ […]

Advertisement

Wordpress Social Share Plugin powered by Ultimatelysocial