ಜಾನುವಾರುಗಳು ಸತ್ತಾಗ 10000 ರೂಪಾಯಿವರೆಗೆ ಪರಿಹಾರ ನೀಡುವ ಅನುಗ್ರಹ ಯೋಜನೆಯನ್ನು ಹಣದ ಕೊರತೆಯ ನೆಪಹೇಳಿ ನಿಲ್ಲಿಸಬಾರದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಸಿಎಂ ಬಿ.ಎಸ್.ಯಡಿಯೂರಪ್ಪಗೆ ಪತ್ರ ಬರೆದಿರುವ ಅವರು, ಅನುಗ್ರಹ ಯೋಜನೆಗೆ ಅವಶ್ಯಕ ಅನುದಾನ ಒದಗಿಸಿ ಜಾನುವಾರು ಕಳೆದುಕೊಂಡ ರೈತರಿಗೆ ಪರಿಹಾರ ನೀಡಬೇಕು. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಮೇಣಗುಡ್ಡದ ಬಳಿ ಕರಬೂಜ ಹಣ್ಣು ಹಾಗೂ ಬಳ್ಳಿಯನ್ನು ತಿಂದು ರಾಮಕೃಷ್ಣಪ್ಪ ಎಂಬ ಕುರಿಗಾರರಿಗೆ ಸೇರಿದ ಸುಮಾರು 60 ಕುರಿಗಳು ಸತ್ತಿವೆ. ಈ ರೀತಿಯ ಪ್ರಕರಣಗಳು ರಾಜ್ಯಾದ್ಯಂತ ಸಂಭವಿಸುತ್ತಿವೆ. ಇದರಿಂದ ಪಶುಪಾಲಕರು ತೀವ್ರ ರೀತಿಯ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಈ ಯೋಜನೆಗೆ ನೂರಾರು ಕೋಟಿ ರೂ.ಅನುದಾನದ ಅವಶ್ಯಕತೆಯೂ ಇರುವುದಿರುವುದರಿಂದ ಯಾವುದೇ ಕಾರಣಕ್ಕೂ ಅನುಗ್ರಹ ಯೋಜನೆಯನ್ನು ನಿಲ್ಲಿಸಿ ಪಶುಪಾಲಕರ ವಿರೋಧಿ ನಿಲುವನ್ನು ಸರ್ಕಾರ ತೆಗೆದುಕೊಳ್ಳಬಾರದು ಎಂದು ಹೇಳಿದ್ದಾರೆ.