ರಾಮಜನ್ಮಭೂಮಿಯನ್ನು ವಿಶ್ವದ ಗಮನ ಸೆಳೆಯುವಂತೆ ರೂಪಿಸಲು ಕೇಂದ್ರ ಸರಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಆ.೫ರ ಭೂಮಿಪೂಜೆ ಸಮಾರಂಭದ ವೇಳೆ ೩೨೬ ಕೋಟಿ ರೂ. ವೆಚ್ಚದಲ್ಲಿ ರಾಮ ಮಂದಿರಕ್ಕೆ ಸಂಬAಧಿಸಿದ ವಿವಿಧ ನಿರ್ಮಾಣ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಲಿದೆ. ಉ.ಪ್ರ. ಸಿಎಂ ಯೋಗಿ ಆದಿತ್ಯನಾಥ್ ಈ ಯೋಜನೆಗಳ ಉಸ್ತುವಾರಿ ವಹಿಸಿಕೊಳ್ಳಲಿದ್ದಾರೆ. ಭೂಮಿಪೂಜೆ ಬಳಿಕ ಮಂದಿರ ನಿರ್ಮಾಣ ಸೇರಿದಂತೆ ಸುತ್ತಮುತ್ತಲಿನ ೫೭ ಎಕರೆಗಳಲ್ಲಿ ರಾಮ ದೇಗುಲ ಸಂಕೀರ್ಣ, ರಾಮ್ಕಥಾ ಪುಂಜ್ ಪಾರ್ಕ್ ನಿರ್ಮಾಣಗೊಳ್ಳಲಿವೆ. ನಕ್ಷತ್ರ ವಾಟಿಕಾ, ಮ್ಯೂಸಿಯಂ, ದೇಶದ ಅತಿ ದೊಡ್ಡ ಧಾರ್ಮಿಕ ಗ್ರಂಥಾಲಯ ಸೇರಿದಂತೆ ಹತ್ತು ಹಲವು ವ್ಯವಸ್ಥೆಗಳನ್ನು ರೂಪಿಸಲು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಮುಂದಾಗಿದೆ.
ಸಿಎಂ ಯೋಗಿ ಉಸ್ತುವಾರಿ
Please follow and like us: