ಸಿಎಂ ರಾಜ್ಯ ಪ್ರವಾಸ ರದ್ದು

ರಾಜ್ಯಾದ್ಯಂತ ಕೊರೊನಾ ಆರ್ಭಟ ಹೆಚ್ಚಾಗುತ್ತಿದ್ದಂತೆಯೇ ಸಿಎಂ ಬಿ.ಎಸ್ ಯಡಿಯೂರಪ್ಪ ರಾಜ್ಯ ಪ್ರವಾಸ ಕೈಬಿಟ್ಟಿದ್ದಾರೆ. ಸಿಎಂ ಬಿಎಸ್‌ವೈ ರಾಜ್ಯದ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ ಹಲವು ಕಾಮಗಾರಿಗಳಿಗೆ ಚಾಲನೆ ನೀಡಬೇಕಿತ್ತು. ಆದರೀಗ, ಕೊರೊನಾ ಭೀತಿಯಿಂದಾಗಿ ಬೆಂಗಳೂರಿನಿAದಲೇ ಆನ್‌ಲೈನ್ ಮೂಲಕ ಕಾಮಗಾರಿಗಳಿಗೆ ಚಾಲನೆ ನೀಡಲು ನಿರ್ಧರಿಸಿದ್ದಾರೆ. ಇಂದು ಶಿವಮೊಗ್ಗಕ್ಕೆ ವಿವಿಧ ಕಾಮರಿಗಳಿಗೆ ಚಾಲನೆ ನೀಡುವ ಸಲುವಾಗಿ ಹೋಗಬೇಕಿತ್ತು. ಆದರೆ, ಕೊರೊನಾ ಕಾರಣದಿಂದ ಆನ್‌ಲೈನ್ ಮೂಲಕ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ ಆನ್‌ಲೈನ್ ಮೂಲಕ ಭೂಮಿ ಪೂಜೆ ನೆರವೇರಿಸಲಿದ್ಧಾರೆ. ಕೊರೋನಾ ಸಮಸ್ಯೆ ಇಲ್ಲದಿದ್ದರೇ ಸ್ಥಳಕ್ಕೆ ಹೋಗಿ ಕಾಮಗಾರಿಗೆ ಚಾಲನೆ ನೀಡಬಹುದಿತ್ತು. ಇದೀಗ ರಾಜ್ಯ ಪ್ರವಾಸ ರದ್ದು ಮಾಡಿರುವ ಅವರು ಬೇರೆ ಜಿಲ್ಲೆಗಳ ವಿವಿಧ ಕಾಮಗಾರಿಗಳಿಗೆ ಆನ್‌ಲೈನ್ ಮೂಲಕ ಚಾಲನೆ ನೀಡಲಿದ್ಧಾರೆ.

Please follow and like us:

Leave a Reply

Your email address will not be published. Required fields are marked *

Next Post

ಬ್ರಿಮ್ಸ್ ಆಸ್ಪತ್ರೆ ಅವ್ಯವಸ್ಥೆಗೆ ಸದ್ಯದಲ್ಲೇ ಕಡಿವಾಣ

Mon Jun 15 , 2020
ಬ್ರಿಮ್ಸ್ ಆಸ್ಪತ್ರೆ ಅವ್ಯವಸ್ಥೆಗೆ ಲಗಾಮು ಹಾಕಲಿದ್ದೇವೆ ಎಂದು ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ. ಬೀದರ್‌ನಲ್ಲಿ ಮಾತನಾಡಿದ ಅವರು, ಬ್ರಿಮ್ಸ್ ಆಸ್ಪತ್ರೆ ಅವ್ಯವಸ್ಥೆ ನೋಡಿ ನಮಗೆ ಸಾಕಾಗಿ ಹೋಗಿದೆ ಎಂದು ಅಸಮಾಧಾನ ಹೊರಹಾಕಿದ ಶಾಸಕರಿಗೆ ಎಲ್ಲವೂ ಸರಿ ಮಾಡುವ ಭರವಸೆ ನೀಡಿದರು. ಬ್ರಿಮ್ಸ್ನಲ್ಲಿ ೭೧ ಗ್ರೂಪ್ ಎ, ೧ ಗ್ರೂಪ್ ಬಿ, ೧೩೫ ಗ್ರೂಪ್ ಸಿ, ೮೨ ಗ್ರೂಪ್ ಡಿ ಸೇರಿ ೨೮೯ ಹುದ್ದೆಗಳು ಇವೆ. ಇಲ್ಲಿನ ಬೋಧಕ ಆಸ್ಪತ್ರೆಯಲ್ಲಿ ಗ್ರೂಪ್ […]

Advertisement

Wordpress Social Share Plugin powered by Ultimatelysocial