ಸಿಎಂ ಸ್ಟಾಲಿನ್ ಪುತ್ರನ ವಿರುದ್ಧ ಹಿಂದೂ ಕಾರ್ಯಕರ್ತರ ಆಕ್ರೋಶ..!

ಸೋಷಿಯಲ್ ಮೀಡಿಯಾದಲ್ಲಿ ಡಿಎಂಕೆ ನಾಯಕನ ಹೇಳಿಕೆಗೆ ವಿರೋಧ

ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಪುತ್ರ ಹಾಗೂ ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ಕುರಿತು ನೀಡಿರೋ ವಿವಾದಾತ್ಮಕ ಹೇಳಿಕೆಗೆ ಆಕ್ರೋಶ ವ್ಯಕ್ತವಾಗುತ್ತಿದೆ. ಉದಯನಿಧಿ ಹೇಳಿಕೆಗೆ ಹಿಂದು ಕಾರ್ಯಕರ್ತರು ಭಾರೀ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ತಮ್ಮ ಹೇಳಿಕೆಗೆ ತೀವ್ರ ಖಂಡನೆ ವ್ಯಕ್ತವಾದ ಮೇಲೂ ಉದಯನಿಧಿ ಮಾರನ್ ಸಮರ್ಥಿಸಿಕೊಂಡಿದ್ದಾರೆ. ನನ್ನ ಹೇಳಿಕೆಗೆ ಈಗಲೂ ನಾ‌ನು ಬದ್ಧ. ಸನಾತನ ಧರ್ಮದಿಂದ ಸಾಮಾಜಿಕ ಅನ್ಯಾಯ ಆಗುತ್ತಿದೆ. ಈ ವಿಚಾರವನ್ನು ನಾನು ಇಂದು, ನಾಳೆಯೂ ಹೇಳುತ್ತೇನೆ ಎಂದಿದ್ದಾರೆ.

ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್ ಅವರು ಸನಾತನ ನಿರ್ಮೂಲನಾ ಸಮ್ಮೇಳನ ಎನ್ನುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ್ದರು. ನೀವು ಈ ಕಾರ್ಯಕ್ರಮವನ್ನು ಸನಾತನ ವಿರೋಧಿ ಸಮ್ಮೇಳನ ಎನ್ನುವ ಬದಲು ಸನಾತನ ನಿರ್ಮೂಲನಾ ಸಮ್ಮೇಳನವೆಂದು ಆಯೋಜಿಸಿದ್ದೀರಿ. ಇದು ಬಹಳ ಇಷ್ಟವಾಯಿತು. ಇದೇ ವೇಳೆ ಉದಯನಿಧಿ ಸ್ಟಾಲಿನ್, ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ ಕಾಯಿಲೆಗೆ ಹೋಲಿಸಿದ್ದರು. ಸದ್ಯ ಇದಕ್ಕೆ ಸೋಷಿಯಲ್​ ಮೀಡಿಯಾದಲ್ಲಿ ನೆಟ್ಟಿಗರು, ಸಚಿವರ ವಿರುದ್ಧ ಸಖತ್ ಗರಂ ಆಗಿ ಕಾಮೆಂಟ್ಸ್​ ಮಾಡುತ್ತಿದ್ದಾರೆ.

ಸನಾತನ ಧರ್ಮದ ವಿರುದ್ಧ ಮಾತನಾಡಿದ್ದಕ್ಕೆ ಸಚಿವ ಉದಯನಿಧಿ ಸ್ಟಾಲಿನ್ ವಿರುದ್ಧ ಸುಪ್ರೀಂಕೋರ್ಟ್​ ವಕೀಲ ವಿನೀತ್ ಜಿಂದಾಲ್ ಅವರು ದೆಹಲಿಯ ಪೊಲೀಸ್ ಠಾಣೆಯೊಂದರಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.​

 

Please follow and like us:

tmadmin

Leave a Reply

Your email address will not be published. Required fields are marked *

Next Post

2 ದಿನದಲ್ಲಿ 51 ಕೋಟಿ ರೂಪಾಯಿ ಬಾಚಿಕೊಂಡ ‘ಖುಷಿ’

Sun Sep 3 , 2023
 ‘ಖುಷಿ’ ಚಿತ್ರಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದು, ಎರಡು ದಿನ ಉತ್ತಮವಾಗಿ ಪ್ರದರ್ಶನ ಕಂಡಿದೆ. ನಟ ವಿಜಯ್​ ದೇವರಕೊಂಡ ಅವರು ‘ಖುಷಿ’ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಈ ಚಿತ್ರಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆ ಸಿಗುತ್ತಿದೆ. ಸೆಪ್ಟೆಂಬರ್​ 1ರಂದು ಅದ್ದೂರಿಯಾಗಿ ಈ ಚಿತ್ರ ರಿಲೀಸ್​ ಆಯಿತು. ತೆಲುಗಿನ ಈ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ತೆರೆಕಂಡಿದೆ. ಕನ್ನಡ, ತಮಿಳು, ತೆಲುಗು, ಮಲಯಾಳಂ ಭಾಷೆಗಳಿಗೆ ಡಬ್​ ಆಗಿ ಬಿಡುಗಡೆ ಆಗಿದ್ದು, ಭಾರತದಲ್ಲಿ ಮಾತ್ರವಲ್ಲದೇ […]

Advertisement

Wordpress Social Share Plugin powered by Ultimatelysocial