ಬಿಹಾರ ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಸಿಡಿಲು ಬಡಿದು 23 ಜನರು ಬಲಿಯಾಗಿದ್ದಾರೆ. ಬಿಹಾರ ರಾಜ್ಯದ ಕೈಮುರ್, ಭೋಜ್ ಪುರ್, ಸರನ್, ಪಾಟ್ನ, ಬುಕ್ಸರ್ ಜಿಲ್ಲೆಗಳಲ್ಲಿ 23 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಸಿಡಿಲಿನ ಅಬ್ಬರಕ್ಕೆ ಸಾವನ್ನಪ್ಪಿದ್ದವರ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಪರಿಹಾರ ನೀಡುವುದಾಗಿ ಬಿಹಾರ ರಾಜ್ಯದ ಸಿಎಂ ನಿತೀಶ್ ಕುಮಾರ್ ಘೋಷಿಸಿದ್ದಾರೆ. ಬಿಹಾರದಲ್ಲಿ ಕಳೆದೊಂದು ವಾರದಿಂದ ಸಿಡಿಲು, ಗುಡುಗು ಸಹಿತ ಭಾರೀ ಮಳೆಯಾಗುತ್ತಿದ್ದು, ವಾರದಲ್ಲಿ ನೂರಕ್ಕೂ ಹೆಚ್ಚು ಜನ ಸಿಡಿಲಿನಿಂದ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.