ಸಿದ್ದರಾಮಯ್ಯ ಆರೋಪಕ್ಕೆ ಸಿ.ಟಿ ರವಿ ಟಾಂಗ್

ಕಾಂಗ್ರೆಸ್ ಸರ್ಕಾರ ಇದ್ದಾಗ ಹಾಸಿಗೆ ದಿಂಬು ಹಗರಣದಲ್ಲಿ ಕೋಟ್ಯಂತರ ಹಣ ಲೂಟಿ ಮಾಡಿದ್ದಾರೆ ಎಂದು ಸಚಿವ ಸಿ.ಟಿ.ರವಿ, ಆರೋಪಿಸಿದ್ದಾರೆ. ವೈದ್ಯಕೀಯ ಸಾಮಗ್ರಿ ಖರೀದಿ ವಿಚಾರದಲ್ಲಿ ಸರ್ಕಾರ ಭ್ರಷ್ಟಾಚಾರ ಮಾಡಿದೆ ಎಂಬ ಸಿದ್ದರಾಮಯ್ಯ ಆರೋಪಕ್ಕೆ ತಿರುಗೇಟು ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರಿಗೆ ಬರೀ ಇಂಥವೇ ಕಾಣುತ್ತವೆಯೇ. ಸುಳ್ಳನ್ನೇ ಮನೆ ದೇವರನ್ನಾಗಿ ಮಾಡಿಕೊಂಡ ಕಾಂಗ್ರೆಸ್‌ನವರು ಬರೀ ಇಂತಹ ಸುಳ್ಳುಗಳನ್ನೇ ಹೇಳಿಕೊಂಡು ತಿರುಗುತ್ತಿದ್ದಾರೆ. ಕೊರೋನಾ ಬಂದ ಹೊಸದರಲ್ಲಿ ಸರ್ಜಿಕಲ್ ಮಾಸ್ಕ್ಗಳು ಮಾತ್ರಾ ಇದ್ದವು. ಅಂತಹ ಸಂಧರ್ಭದಲ್ಲಿ ಬೇರೆ ಕಡೆಯಿಂದ ಮಾಸ್ಕ್ ಮತ್ತು ಪಿಪಿಇ ಕಿಟ್ ಖರೀದಿ ಮಾಡುವುದು ಅನಿವಾರ್ಯವಾಗಿತ್ತು. ಆದರೆ ಇದರಲ್ಲಿ ಹುಳುಕು ಹುಡುಕೋದು ಸರಿಯಲ್ಲ ಎಂದು ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

Wed Jul 8 , 2020
ಬೆಂಗಳೂರಿನಲ್ಲಿ ಕೊರೊನಾ ದೊಡ್ಡಮಟ್ಟದಲ್ಲಿ ಸ್ಫೋಟವಾಗಿದೆ. ಜನ ಭಯಗೊಂಡು ಬೆಂಗಳೂರು ಬಿಡುತ್ತಿದ್ದಾರೆ. ಸರ್ಕಾರ ಅವರಿಗೆ ವಿಶ್ವಾಸ ತುಂಬುವ ಕೆಲಸ ಮಾಡಬೇಕಿತ್ತು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸುರಿನಲ್ಲಿ ಮಾತನಾಡಿದ ಅವರು, ಜನರಿಗೆ ಊಟ, ಕೆಲಸ ಮತ್ತು ಹಣ ನೀಡಬೇಕಿತ್ತು. ಸರ್ಕಾರ ಆ ಕೆಲಸ ಮಾಡಲಿಲ್ಲ. ಜನ ಇದರಿಂದ ಬೆಂಗಳೂರು ಬಿಡುತ್ತಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಸರ್ಕಾರ ವೆಚ್ಚ ಮಾಡಿರುವ ಹಣದ ಲೆಕ್ಕ ಕೊಡಬೇಕು. ಅಧಿಕಾರಿಗಳಿಂದ ನನ್ನ ಬಳಿಗೆ ದಾಖಲೆ ಕಳಿಸಿ. ನಾನೇ […]

Advertisement

Wordpress Social Share Plugin powered by Ultimatelysocial