ಸಿದ್ದರಾಮಯ್ಯ ಡಿಕೆಶಿ ನಡುವೆ ಮೆಗಾಫೈಟ್

ರಾಜ್ಯ ಕಾಂಗ್ರೆಸ್‌ನಲ್ಲಿ ಎರಡು ಶಕ್ತಿ ಕೇಂದ್ರಗಳ ನಡುವೆ ತಿಕ್ಕಾಟ ಶುರುವಾಗಿದೆ. ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ಮುಸುಕಿನ ಗುದ್ದಾಟ ನಡೀತಿದೆ. ಪಕ್ಷದ ಮೇಲೆ ಹಿಡಿತ ಸಾಧಿಸಲು ಉಭಯ ನಾಯಕರ ನಡುವೆ ತೆರೆಮರೆ ನಡುವೆ ಪೈಪೋಟಿ ಏರ್ಪಟ್ಟಿದೆ ಎನ್ನಲಾಗ್ತಿದೆ.ಪದಾಧಿಕಾರಿಗಳ ನೇಮಕ ಸೇರಿದಂತೆ ಹಲವು ವಿಚಾರಗಳಲ್ಲಿ ಇಬ್ಬರು ನಾಯಕರ ನಡುವೆ ಮನಸ್ತಾಪ ಇರೋದು ಈಗಾಗಲೇ ಬಹಿರಂಗವಾಗಿದೆ. ತಮ್ಮ ಬೆಂಬಲಿಗರಿಗೆ ಪದಾಧಿಕಾರಿಗಳ ನೇಮಕದಲ್ಲಿ ಅವಕಾಶ ನೀಡಲು ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಮೈಗಾಫೈಟ್ ನಡೆಸಿದ್ದಾರೆ.  ಮತ್ತೊಮ್ಮೆ ಸಿಎಂ ಕನಸಿನೊಂದಿಗೆ ಪಕ್ಷದ ಮೇಲಿನ ಹಿಡಿತ ಉಳಿಸಿಕೊಳ್ಳಲು ಸಿದ್ದರಾಮಯ್ಯ ಪೈಪೋಟಿ ನಡೆಸ್ತಿದಾರೆ. ಆದರೆ ಪಕ್ಷದಲ್ಲಿನ ಸಿದ್ದರಾಮಯ್ಯ ಪ್ರಭಾವ ಕುಗ್ಗಿಸಿ ತನ್ನ ವರ್ಚಸ್ಸನ್ನ ಹೆಚ್ಚಿಸಿಕೊಳ್ಳಲು ಡಿಕೆಶಿ ಹರಸಾಹಸ ಪಡುತ್ತಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ರೈಲು ಸಂಚಾರ ಆರಂಭ

Mon Jun 1 , 2020
ದೀರ್ಘಕಾಲದ ಲಾಕ್‌ಡೌನ್ ನಂತರ ಇಂದು ರೈಲು ಸೇವೆ ಆರಂಭವಾಗಿದೆ. ೨೦೦ ರೈಲುಗಳು ವೇಳಾಪಟ್ಟಿ ಅನುಸಾರ ಸಂಚರಿಸಲಿದ್ದು, ಮೊದಲ ರೈಲು ಮಹಾನಗರಿ ಎಕ್ಸ್ಪ್ರೆಸ್ ಮುಂಬೈ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್‌ನಿಂದ ಉತ್ತರ ಪ್ರದೇಶದ ವಾರಣಾಸಿಗೆ ಪ್ರಯಾಣ ಬೆಳೆಸಿದೆ.  ಮೊದಲ ರೈಲು ೦೧೦೯೨ ಸಿಎಸ್‌ಎಂಟಿ ಮುಂಬೈ-ವಾರಣಾಸಿ ವಿಶೇಷ ರೈಲು ೨೦೨೦ ಜೂನ್. ೧ರಂದು ೦೦.೧೦ಕ್ಕೆ ಹೊರಟಿದೆ ಎಂದು ಸೆಂಟ್ರಲ್ ರೈಲ್ವೆ ಇಲಾಖೆ ಟ್ವೀಟ್ ಮಾಡಿದೆ. ಮೇ ೧೨ರಂದು ಸರಿಸುಮಾರು ೧.೪೫ ಲಕ್ಷ ಪ್ರಯಾಣಿಕರು […]

Advertisement

Wordpress Social Share Plugin powered by Ultimatelysocial