ಸಿದ್ದರಾಮಯ್ಯ ಬಿಜೆಪಿಗೆ ಬಂದರೆ ಅಚ್ಚರಿಪಡಬೇಕಿಲ್ಲ

ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ಅವರು ಬಿಜೆಪಿಗೆ ಬಂದರೂ ಅಚ್ಚರಿಪಡಬೇಕಿಲ್ಲ, ರಾಜಕೀಯದಲ್ಲಿ ಯಾವುದೂ ಅಸಾಧ್ಯವಲ್ಲ ಎಂದೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ಮಾರ್ಮಿಕವಾಗಿ ನುಡಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವಿನ ಶೀತಲ ಸಮರ ಯಾವ ಘಟ್ಟಕ್ಕೆ ಬೇಕಾದರೂ ತಲುಪಬಹುದು ಎಂದರು.  ಬಿ.ಎಸ್. ಯಡಿಯೂರಪ್ಪ, ಎಚ್.ಡಿ.ದೇವೇಗೌಡ ಅವರಂತೆಯೇ ಸಿದ್ದರಾಮಯ್ಯ ಕೂಡಾ ಜನನಾಯಕ. ಅವರು ಇರಬೇಕಾದ ಪಕ್ಷ ಬಿಜೆಪಿ ಎಂದರು. ಅವರು ಬಿಜೆಪಿ ಹೊಗಳಲು ಸಾಧ್ಯವಿಲ್ಲ. ಬಿಜೆಪಿಗೆ ಬಂದಾಗ ಮಾತ್ರ ಖಂಡಿತಾ ಹೋಗಳುತ್ತಾರೆ ಎಂದು ಪ್ರತಿಕ್ರಿಯಿಸಿದರು.

Please follow and like us:

Leave a Reply

Your email address will not be published. Required fields are marked *

Next Post

ಮಂಗಳೂರು ಖಾಸಗಿ ಬಸ್ ಸಂಚಾರ ಆರಂಭ

Mon Jun 1 , 2020
ಮಂಗಳೂರಿನಲ್ಲಿ ಇಂದಿನಿಂದ ಖಾಸಗಿ ಬಸ್‌ ಸಂಚಾರ ಆರಂಭವಾಗಿದೆ. ಕೊರೊನಾ ಹಿನ್ನಲೆಯಲ್ಲಿ ಎಲ್ಲಾ ಖಾಸಗಿ ಬಸ್ಸುಗಳಿಗೆ ಸ್ಯಾನಿಟೈಸರ್ ಮಾಡಲಾಗಿದೆ. ಮಂಗಳೂರಿನ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಒಳ ಭಾಗ, ಹೊರ ಭಾಗ ಸೇರಿದಂತೆ ಪೂರ್ತಿ ಬಸ್‌ಗೆ ಸ್ಯಾನಿಟೈಸರ್ ಮಾಡಲಾಗಿದ್ದು,  ಫುಟ್‌ ಬೋರ್ಡ್‌ಗಳಿಗೆ ಸ್ಯಾನಿಟೈಸರ್ ಸಿಂಪಡನೆ ಮಾಡಲಾಗುತ್ತಿದೆ. ಇನ್ನು ಬಸ್‌ ನಿಲ್ದಾಣದಲ್ಲಿ ಖಾಸಗಿ ಸಂಸ್ಥೆಯು ಬಸ್‌ಗಳ ಪ್ರತಿ ಟ್ರಿಪ್‌ ಬಳಿಕ ಸ್ಯಾನಿಟೈಸರ್ ಮಾಡಲಾಗುತ್ತಿದೆ. ಪ್ರತಿ ಪ್ರಯಾಣಿಕರಲ್ಲಿ ಸಾಮಾಜಿಕ ಅಂತರ ಕಾಪಾಡುವಂತೆ ಹೇಳಲಾಗಿದೆ. […]

Advertisement

Wordpress Social Share Plugin powered by Ultimatelysocial