ಮುಂಬೈ: ಯೆಸ್ ಬ್ಯಾಂಕ್- ಡಿಎಚ್ ಎಫ್ ಎಲ್ ವಂಚನೆ ಪ್ರಕರಣದಲ್ಲಿ ಆರೋಪಿಗಳಾದ ಡಿಎಚ್ ಎಫ್ ಎಲ್ ಪ್ರಮೋರ್ರಾದ ಕಪಿಲ್ ಹಾಗೂ ಧೀರಜ್ ವಾಧ್ವಾನ್ ಅವರನ್ನು ಸಿಬಿಐ ವಶಕ್ಕೆ ಪಡೆಯಲಾಗಿದೆ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ಭಾನುವಾರ ಹೇಳಿದ್ದಾರೆ. ಸಿಬಿಐ ತಂಡವು ಕಪಿಲ್ ಮತ್ತು ಧೀರಜ್ ವಾಧ್ವಾನ್ ಅವರನ್ನು ಕಸ್ಟಡಿಗೆ ಪಡೆದುಕೊಂಡಿದೆ. ಸತಾರಾ ಪೊಲೀಸರು ಅವರಿಗೆ ಎಲ್ಲ ಅಗತ್ಯ ನೆರವು ನೀಡಿದ್ದಾರೆ. ಲಿಖಿತವಾಗಿ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ಬೆಂಗಾವಲು ವಾಹನ ಮತ್ತು ಹದಿಮೂರು ಮಂದಿ ಭದ್ರತಾ ಸಿಬ್ಬಂದಿ ಜತೆಗೆ ಮುಂಬೈನ ತನಕ ಬಿಡಲಾಗಿದೆ. ಬಂಧನದ ಪ್ರಕ್ರಿಯೆಗಳು ನಡೆಯುತ್ತಿವೆ. ಕಾನೂನು ಎಲ್ಲರಿಗೂ ಒಂದೇ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.
ಸಿಬಿಐ ವಶಕ್ಕೆ ಡಿಎಚ್ ಎಫ್ ಎಲ್ ಪ್ರವರ್ತಕರು
Please follow and like us: