ಸೆಂಟ್ರಲ್ ಮಾರುಕಟ್ಟೆ ಗೊಂದಲವನ್ನು ಬಗೆಹರಿಸಲಿ

ಸೆಂಟ್ರಲ್ ಮಾರುಕಟ್ಟೆ ಎಪಿಎಂಸಿಗೆ ಸ್ಥಳಾಂತರ ಮಾಡುವುದಾದಲ್ಲಿ ಮೊದಲಿಗೆ ಅಲ್ಲಿ ಸರಿಯಾದ ಮೂಲಭೂತ ಸೌಕರ್ಯ ಗಳ ವ್ಯವಸ್ಥೆ ಮಾಡಲಿ ಎಂದು ಮಾಜಿ ಸಚಿವ‌ ಯು.ಟಿ.ಖಾದರ್ ಹೇಳಿದರು. ಮಂಗಳೂರಿನಲ್ಲಿ ಮಾತನಾಡಿದ ಅವರು, ಮಾರುಕಟ್ಟೆ ಸ್ಥಳಾಂತರ ಮಾಡುವ ಸಂದರ್ಭ ನಮ್ಮನ್ನು ಕರೆಯದೆ ಶಾಸಕರು, ಸಂಸದರು ಹಾಗೂ ಅಧಿಕಾರಿಗಳ ಸಭೆ ಮಾಡಿದ್ದರು. ಆದರೆ ಇದೀಗ ವ್ಯಾಪಾರಿಗಳಿಗೆ ಸಮಸ್ಯೆಗಳು ತಲೆದೋರಿರುವ ಸಂದರ್ಭದಲ್ಲಿ ಯಾರೂ ಇತ್ತ ತಲೆಹಾಕುತ್ತಿಲ್ಲ. ಸೆಂಟ್ರಲ್ ಮಾರುಕಟ್ಟೆ ಸ್ಥಳಾಂತರ ದಿಂದ ವ್ಯಾಪಾರಿಗಳು ಮಾತ್ರವಲ್ಲ ಜನಸಾಮಾನ್ಯರಿಗೂ ಸಮಸ್ಯೆಯಾಗಿದೆ. ಆದ್ದರಿಂದ ಶಾಸಕರು, ಸಂಸದರು, ಉಸ್ತುವಾರಿ ಸಚಿವರು ತಕ್ಷಣ ಈ ಸಮಸ್ಯೆಯನ್ನು ಬಗೆಹರಿಸಲಿ ಎಂದು ಹೇಳಿದರು

Please follow and like us:

Leave a Reply

Your email address will not be published. Required fields are marked *

Next Post

ಕೊರೊನಾ  ಪ್ರಕರಣ ಹೆಚ್ಚಾಗುವ ಸಾಧ್ಯತೆ

Wed Jun 10 , 2020
ಜುಲೈ ತಿಂಗಳಿನಲ್ಲಿ ಹೆಚ್ಚು ಕೊರೊನಾ ವೈರಸ್‌ ಪ್ರಕರಣಗಳು ದಾಖಲಾಗುವ ಸಾಧ್ಯತೆ ಇದೆ ಎಂದು ಸಚಿವ ಡಾ ಸುಧಾಕರ್ ಹೇಳಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ಪರಿಣತರು ಕೊರೊನಾ ಬಗ್ಗೆ ಮಾಹಿತಿ ನೀಡಿದ್ದಾರೆ. ನಿಜವಾದ ಕೊರೊನಾ ಸ್ಪೈಕ್ ಜುಲೈನಲ್ಲಿ ಬರಬಹುದು ಅಂತ ತಿಳಿಸಿದ್ದಾರೆ . ಮೇ ತಿಂಗಳಿನಲ್ಲಿ ಕೊರೊನಾ ವೈರಸ್‌ ಪ್ರಕರಣಗಳು ಹೆಚ್ಚಾದವು. ಜೂನ್‌ನಲ್ಲಿ ಆ ಸಂಖ್ಯೆಯಲ್ಲಿ ಇನ್ನಷ್ಟು ಏರಿಕೆ ಬಂತು. ಸದ್ಯ, ದಿನಕ್ಕೆ 200 ರಿಂದ 300 ಪ್ರಕರಣಗಳು ಕರ್ನಾಟಕದಲ್ಲಿ ಪತ್ತೆಯಾಗುತ್ತಿವೆ. ಆದರೆ, […]

Advertisement

Wordpress Social Share Plugin powered by Ultimatelysocial