ಕೋವಿಡ್-೧೯ ವಿಚಾರದಲ್ಲಿ ಬಡವರು, ಶ್ರೀಮಂತರು, ಅಧಿಕಾರಿಗಳು, ಸಾಮಾನ್ಯ ಜನರು ಎಂದು ಭೇದ-ಭಾವ ಮಾಡದೇ ಎಲ್ಲರಿಗೂ ಸಮಾನವಾಗಿ ಉಚಿತ ಚಿಕಿತ್ಸೆ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸರಕಾರಕ್ಕೆ ಆಗ್ರಹಿಸಿದ್ದಾರೆ. ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಎಲ್ಲರಿಗೂ ಆರೋಗ್ಯ ಸೇವೆ ಸಿಗಬೇಕು ಎಂಬ ದೃಷ್ಟಿಯಿಂದ ಆರೋಗ್ಯ ಕರ್ನಾಟಕ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿತ್ತು. ಕೇಂದ್ರ ಸರ್ಕಾರ ಆಯುಷ್ಮಾನ್ ಭಾರತ ಯೋಜನೆ ತಂದಿದೆ. ಇವೆಲ್ಲ ಇದ್ದರೂ ಸರ್ಕಾರ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್-೧೯ ಚಿಕಿತ್ಸೆಗೆ ದರ ನಿಗದಿ ಮಾಡಿದೆ. ಇನ್ನು ಖಾಸಗಿ ಆಸ್ಪತ್ರೆಗೆ ನೇರ ದಾಖಲಾಗುವ ರೋಗಿಗಳಿಗೆ ೨೫ ಸಾವಿರ ನಿಗದಿ ಮಾಡಿದೆ. ಮೊದಲೇ ಆರ್ಥಿಕ ಸಂಕಷ್ಟದಿAದ ನರಳುತ್ತಿರುವ ಜನ ಈ ಹಣವನ್ನು ಎಲ್ಲಿಂದ ತರಬೇಕು? ಸರಕಾರ ಅವರ ಪ್ರಾಣದ ಜತೆ ಚೆಲ್ಲಾಟ ಆಡುತ್ತಿದೆ ಎಂದು ವಾಗ್ಧಾಳಿ ನಡೆಸಿದರು.
ಸೋಂಕಿತರ ಉಚಿತ ಚಿಕಿತ್ಸೆಗೆ ಡಿಕೆಶಿ ಆಗ್ರಹ
Please follow and like us: