ಸೋಮವಾರದಿಂದ ಶಾಲೆ ಶುರು ನೈಟ್‌ ಕಫ್ರ್ಯೊ ರದ್ದು,

ಬೆಂಗಳೂರು,ಜ.29- ರಾಜ್ಯದಲ್ಲಿ ಕೋವಿಡ್ ಸೋಂಕಿತ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ ಕಫ್ರ್ಯೂ ರದ್ದು, ಶಾಲೆಗಳನ್ನು ಸೋಮವಾರದಿಂದ ಪುನರಾರಂಭಿಸುವುದು ಹಾಗೂ ಹಾಲಿ ಇರುವ ಕೆಲ ನಿಯಮಗಳನ್ನು ಸಡಿಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಆರ್.ಅಶೋಕ್, ಡಾ.ಕೆ.ಸುಧಾಕರ್, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಬಿಬಿಎಂಪಿ ಅಧಿಕಾರಿಗಳ ಜೊತೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಆರ್.ಅಶೋಕ್ ಅವರು, ನೈಟ್ ಕಫ್ರ್ಯೂವನ್ನು ರದ್ದುಗೊಳಿಸಿ, ಶಾಲೆಗಳನ್ನು ಪುನಾರಂಭಿಸಲಾಗುವುದು ಎಂದರು.ಹೋಟೆಲ್ ಉದ್ಯಮ, ಮದ್ಯ ಮಾರಾಟ, ಬಾರ್ ಅಂಡ್ ರೆಸ್ಟೋರೆಂಟ್‍ಗಳೀಗೆ ಇದ್ದ ಶೇ.50ರಷ್ಟು ಮಿತಿಯನ್ನು ಕೂಡ ತೆರವುಗೊಳಿಸಲಾಗುವುದು ಎಂದು ಅವರು ತಿಳಿಸಿದರು. ದೇವಾಲಯಗಳಲ್ಲಿ ಪೂಜೆ ಮತ್ತಿತರ ಧಾರ್ಮಿಕ ಚಟುವಟಿಕೆಗಳಿಗೆ ವಿಸಿದ್ದ ನಿರ್ಬಂಧಗಳನ್ನು ಕೂಡ ತೆರವುಗೊಳಿಸಲು ತೀರ್ಮಾನಿಸಲಾಗಿದೆ. ಎಲ್ಲ ಚಟುವಟಿಕೆಗಳು ಮಾರ್ಗಸೂಚಿಗಳ ಅನ್ವಯ ನಡೆಯಬೇಕು ಎಂದು ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

''ಗಟ್ಟಿಮೇಳ'' ಸೀರಿಯಲ್ ಗ್ಯಾಂಗ್ ಮೇಲೆ ರಕ್ಷಿತ್ ಸೇರಿ ಮೇಲೆ 7 ಮಂದಿ FIR ಪ್ರಕರಣ;

Sat Jan 29 , 2022
ಬೆಂಗಳೂರು: ಕನ್ನಡ ಕಿರುತೆರೆ ಜನಪ್ರಿಯ ಧಾರಾವಾಹಿ ಗಟ್ಟಿಮೇಳ ಸೀರಿಯಲ್ ನಟ ರಕ್ಷಿತ್ ಅಂಡ್ ಗ್ಯಾಂಗ್ ಕುಡಿದು ರಂಪಾಟ ಮಾಡಿದ್ದು, ಅವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಕೆಂಗೇರಿ ಬಳಿ ಇರುವ ಜಿಂಜರ್ ಲೇಕ್ ವ್ಯೂ ಹೋಟೆಲ್​ಗೆ ನಟ ರಕ್ಷಿತ್, ರಂಜನ್, ಅನುಷಾ, ಅಭಿಷೇಕ್, ಶರಣ್ಯ, ಸೇರಿದಂತೆ 7 ಜನ ಊಟ ಮಾಡುವುದಕ್ಕೆ ಬಂದಿದ್ದರು. ಈ ವೇಳೆ ಮದ್ಯ ಸೇವಿಸಿ ರಕ್ಷಿತ್ ಅಂಡ್ ಗ್ಯಾಂಗ್ ಗಲಾಟೆ ಮಾಡಿದ್ದಾರೆ. ಗಲಾಟೆ ಮಾಡುತ್ತಿದ್ದಾರೆ ಎಂದು […]

Advertisement

Wordpress Social Share Plugin powered by Ultimatelysocial