ಸೌಂದರ್ಯ ಆತ್ಮಹತ್ಯೆ; ಬಿ.ಎಸ್. ಯಡಿಯೂರಪ್ಪ ಮೊಮ್ಮಗಳು

 

ಬೆಂಗಳೂರು: ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ಅವರ ಮೊಮ್ಮಗಳು ಡಾ.ಸೌಂದರ್ಯ ಆತ್ಮಹತ್ಯೆ ಮಾಡಿಕೊಂಡು ದುರಂತ ಅಂತ್ಯ ಕಂಡಿದ್ದಾರೆ. ಸೌಂದರ್ಯರನ್ನು ಉಳಿಸಿಕೊಳ್ಳಲು ಕೊನೇ ಕ್ಷಣದಲ್ಲಿ ಕುಟುಂಬಸ್ಥರು ಮತ್ತು ವೈದ್ಯರು ಯತ್ನಿಸಿದ್ದರಾದರೂ ಫಲಿಸಲಿಲ್ಲ ಎಂಬ ವಿಚಾರ ತಿಳಿದುಬಂದಿದೆ.

ಬಿಎಸ್​ವೈ ಪುತ್ರಿ ಪದ್ಮಾವತಿ ಅವರ ಮಗಳು ಸೌಂದರ್ಯ ವೈದ್ಯೆಯಾಗಿದ್ದರು. 3 ವರ್ಷದ ಹಿಂದಷ್ಟೇ ಅಂದ್ರೆ 2018ರಲ್ಲಿ ಡಾ.ನೀರಜ್​ ಎಂಬುವರ ಜತೆ ಸೌಂದರ್ಯ ಮದ್ವೆ ಅದ್ದೂರಿಯಾಗಿ ನೆರವೇರಿತ್ತು. ದಂಪತಿಗೆ ಒಂದು ವರ್ಷದ ಮುದ್ದಾದ ಮಗು ಕೂಡ ಇದೆ. ದಂಪತಿ ಇಬ್ಬರೂ ಕ್ರೆಸೆಂಟ್ ರಸ್ತೆಯ ಅಪಾರ್ಟ್‌ಮೆಂಟ್​ನಲ್ಲಿ ನೆಲೆಸಿದ್ದರು. ದಂಪತಿಗೆ ಒಂದು ಮಗು ಇದೆ. ದಂಪತಿ ಇಬ್ಬರೂ ಅನ್ಯೂನ್ಯವಾಗಿದ್ದರು. ಶುಕ್ರವಾರ ಬೆಳಗ್ಗೆ 8 ಗಂಟೆಗೆ ಪತಿ ಡಾ. ನೀರಜ್​ ಕೆಲಸಕ್ಕೆ ಎಂಎಸ್ ರಾಮಯ್ಯ ಆಸ್ಪತ್ರೆಗೆ ಹೋಗಿದ್ದರು. ಬೆಳಗ್ಗೆ 10 ಗಂಟೆ ಸುಮಾರಿಗೆ ಮನೆಗೆ ಕೆಲಸದವರು ಮನೆಗೆ ಬಂದರೂ ಸೌಂದರ್ಯ ಬಾಗಿಲು ತೆರೆದಿರಲಿಲ್ಲ. ಆಗ ಡಾ.ನೀರಜ್​ ಅವರಿಗೆ ಕರೆ ಮಾಡಿ ವಿಷಯ ತಿಳಿಸುತ್ತಾರೆ. ಬಳಿಕ ಒಳ ಬಂದು ನೋಡಿದಾಗ ಸೌಂದರ್ಯ ರೂಮಿನ ಫ್ಯಾನಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಕಂಡು ಬಂದರು. ಕೂಡಲೇ ಅವರನ್ನು ಸಮೀಪದ ಮಲ್ಲಿಗೆ ಆಸ್ಪತ್ರೆಗೆ ರವಾನಿಸಲಾಗಿತ್ತು.

ವೆಂಟಿಲೇಟರ್​ ಅಳವಡಿಸಿ ಸೌಂದರ್ಯ ಅವರನ್ನ ಬದುಕಿಸಲು ವೈದ್ಯರು ಯತ್ನಿಸಿದ್ದರಾದರೂ ಫಲಿಸಲಿಲ್ಲ. ಮರೋತ್ತರ ಪರೀಕ್ಷೆಗಾಗಿ ಶವವನ್ನು ಬೌರಿಂಗ್​ ಆಸ್ಪತ್ರೆಗೆ ರವಾನಿಸಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಬಿಎಸ್​ವೈ ಕುಟುಂಬಸ್ಥರು ಮತ್ತು ಡಾ.ನೀರಜ್​ ಕುಟುಂಬಸ್ಥರು ಆಸ್ಪತ್ರೆ ಬಳಿ ದೌಡಾಯಿಸಿದ್ದು, ಕುಟುಂಬಸ್ಥರ ಆಕ್ರಂದ ಮುಗಿಲು ಮುಟ್ಟಿದೆ.

ಇನ್ನು ಕೆಲವೇ ಕ್ಷಣದಲ್ಲಿ ಬೆಂಗಳೂರು ಉತ್ತರ ತಾಲೂಕಿನ ಅಬ್ಬಿಗೆರೆಯಲ್ಲಿರುವ ಡಾ.ನೀರಜ್​ ನಿವಾಸಕ್ಕೆ ಮೃತದೇಹ ತೆಗೆದುಕೊಂಡು ಬರುವ ಹಿನ್ನೆಲೆ ಮನೆ ಬಳಿ ಪೊಲೀಸ್​ ಬಂದೋಬಸ್ತ್​ ಏರ್ಪಡಿಸಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಲೂನ್ & ಸ್ಪಾಗೆ ಹೋಗುವ ಮುನ್ನ ಈ ಸ್ಟೋರಿ ನೋಡಿ | Saloon And Spa | Special Story | Crime | Speed News |

Fri Jan 28 , 2022
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada         Please follow and like us:

Advertisement

Wordpress Social Share Plugin powered by Ultimatelysocial