ಹಲವಾರು ದಶಕಗಳಿಂದಲೂ ಬಿದ್ರಿ ಕಲಾಕೃತಿಗಳ ರಚನೆ- ಬೀದರ್ ಜಿಲ್ಲೆ ಕೀರ್ತಿ ಹಬ್ಬಿಸಿದ ಬಿದ್ರಿ ಕಲಾಕೃತಿ

ಬೀದರ್ ಬಿದ್ರಿ ಕಲೆಯಿಂದಾಗಿಯೂ ರಾಷ್ಟ್ರಮಟ್ಟದಲ್ಲಿ ಹೆಸರಾಗಿದೆ. ಹಲವಾರು ದಶಕಗಳಿಂದಲೂ ಬಿದ್ರಿ ಕಲಾಕೃತಿಗಳ ರಚನೆ ಕಾರ್ಯದಲ್ಲಿ ತೊಡಗಿಸಿಕೊಂಡ ಅನೇಕರು ಕರ್ನಾಟಕ ಸರ್ಕಾರದ ಪ್ರಶಸ್ತಿ ಮತ್ತು ರಾಷ್ಟ್ರಮಟ್ಟದ ಪ್ರಶಸ್ತಿಗಳನ್ನು ಗಿಟ್ಟಿಸಿ ಬೀದರ ಜಿಲ್ಲೆಯ ಕೀರ್ತಿ ಹಬ್ಬಿಸಿದ್ದಾರೆ.

ಇಂತಹ ಮಹತ್ವದ ಪಾರಂಪರಿಕ ಕಲೆಗಳಲ್ಲೊಂದಾದ ಪ್ರಸಿದ್ಧ ಬಿದ್ರಿ ಕಲೆಗೆ ಪುನಶ್ಚೇತನ ಮತ್ತು ಈ ಬಿದ್ರಿ ಕಲೆಯ ಕರಕುಶಲಗಾರರಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸುವ ಕುರಿತಂತೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರತ್ನಪ್ರಭ ಅವರು ಹಾಗೂ ಬೀದರ್ ಜಿಲ್ಲಾಧಿಕಾರಿಗಳಾದ ರಾಮಚಂದ್ರನ್ ಆರ್ ಇತ್ತೀಚೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಸಿದ ವಿಡಿಯೋ ಸಂವಾದ ಮತ್ತು ಸಭೆಯಲ್ಲಿ ಸಮಗ್ರ ಚರ್ಚೆ ನಡೆಸಿದರು. ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿಗಳು, ಗಡಿನಾಡು ಬೀದರ್ ಜಿಲ್ಲೆಗೆ ಬಿದ್ರಿ ಕಲೆಯಿಂದಲೂ ವಿಶೇಷ ಮಾನ್ಯತೆ ಸಿಕ್ಕಿದೆ. ಹೀಗಾಗಿ ಈ ಕಲೆಗೆ ಪುನಶ್ವೇತನ ಕೊಡಲು ಮತ್ತು ಬಿದ್ರಿ ಕಲೆಯಂತಹ ಕಸುಬನ್ನೇ ನಂಬಿ ಬದುಕು ನಡೆಸುವಂತಹ ಕರಕುಶಲಗಾರರ ಕಲ್ಯಾಣದ ಹಿನ್ನೆಲೆಯಲ್ಲಿ ಕಾರ್ಯಯೋಜನೆ ರೂಪಿಸಿಕೊಳ್ಳುವುದು ಎಂದರು.

Please follow and like us:

Leave a Reply

Your email address will not be published. Required fields are marked *

Next Post

ಇಬ್ಬರು ಲ್ಯಾಪ್`ಟಾಪ್ ಕಳ್ಳರ ಬಂಧನ-ಬಂಧಿತರಿಂದ 3 ಮಾನಿಟರ್ ಲ್ಯಾಪ್`ಟಾಪ್ ವಶ

Wed Oct 7 , 2020
ಮೂರು ಮಾನಿಟರ್ ಒಂದು ಲ್ಯಾಪ್ ಟಾಪ್ ಒಂದು ಸಿಪಿಯು ಮತ್ತು ಸುಮಾರು 50-60 ಸಾವಿರ ಬೆಲೆ ಬಾಳುವ ವಿಡಿಯೋ ಕ್ಯಾಮರಾವನ್ನು ಕದ್ದು ಸಾಗಿಸುತ್ತಿದ್ದ ಇಬ್ಬರು ಕಳ್ಳರನ್ನು ಕನಕಪುರ ತಾಲ್ಲೂಕಿನ ಟಿ.ಬೇಕುಪ್ಪೆ ಸರ್ಕಲ್ ಬಳಿ ಕನಕಪುರ  ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈಗಾಗಲೇ ಮೊದಲೇ ಆರೋಪಿಗಳ ಮೇಲೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಕೇಸ್ ದಾಖಲಾಗಿದ್ದು ಆರೋಪಿಯು ಕನಕಪುರ ತಾಲೂಕಿನ ನಿಡಗಲ್ ಗ್ರಾಮದ ಬ್ಯಾಟರಾಜ(26), ಇನ್ನೊಬ್ಬ ಆರೋಪಿಯು ಚಿಕ್ಕ ಕೊಪ್ಪದ ಮಂಜು (28) […]

Advertisement

Wordpress Social Share Plugin powered by Ultimatelysocial