ಹಳಬರು,ಹೊಸಬರು ಎಂಬ ವಿಚಾರವೇ ಬರಲ್ಲ

ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಮಾಡುವಾಗ ಸರ್ಕಾರ ಉಳಿಸಿದವರಿಗೂ, ಸಾಮಾನ್ಯ ಕಾರ್ಯಕರ್ತರಿಗೂ ತೃಪ್ತಿ ತರುವ ರೀತಿ ನಡೆಯಲಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ – ಜೆಡಿಎಸ್ ನಲ್ಲಿದ್ದ ಅನೇಕರು ಬಿಜೆಪಿಗೆ ಬಂದಿದ್ದಾರೆ. ಸರ್ಕಾರ ರಚಿಸಿ, ಉಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ಋಣವನ್ನು ನಾವು ತೀರಿಸಬೇಕಾಗಿದೆ. ಸುಮ್ಮನೆ ಕರೆದು ಮೋಸ ಮಾಡುವ ಪ್ರಶ್ನೆಯೇ ಉದ್ಭವವಾಗುವುದಿಲ್ಲ. ಹಲವು ವರ್ಷದಿಂದ ಪಕ್ಷ ಕಟ್ಟಿದ ಸಾಮಾನ್ಯ ಕಾರ್ಯಕರ್ತರು ಸಹ ಇದ್ದಾರೆ. ಪ್ರಸ್ತುತ 9 ಸ್ಥಾನಗಳಿದ್ದು, ಅವರಿಗೂ ಅವಕಾಶ ಕಲ್ಪಿಸಬೇಕಿದೆ. ಸೋಮವಾರ ಬಿಜೆಪಿ ಕೋರ್ ಕಮಿಟಿಯ ಸಭೆ ನಡೆಯಲಿದೆ. ಈ ಸಭೆಯಲ್ಲಿ ಆಯ್ಕೆ ಮಾಡಿ, ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಲಾಗುತ್ತದೆ. ಇಲ್ಲಿ ಹಳಬರು, ಹೊಸಬರು ಎಂಬ ವಿಚಾರವೇ ಬರಲ್ಲ. ಸರ್ಕಾರ ಉಳಿಸದವರಿಗೂ, ಸಾಮಾನ್ಯ ಕಾರ್ಯಕರ್ತರಿಗೂ ತೃಪ್ತಿ ತರೋ ಆಯ್ಕೆ ನಡೆಯಲಿದೆ ಎಂದು ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಬೀದರ ಜಿಲ್ಲೆಯಲ್ಲಿ ಸೋಯಾ ಬೀಜದ ಕೊರತೆ

Sat Jun 13 , 2020
ಲಾಕಡೌನ ಮಧ್ಯ ರೈತರು ಮುಂಗಾರು ಬಿತ್ತನೆಗಾಗಿ ಭೂಮಿಯ ಸಿದ್ಧತೆ ಮಾಡಿಕೊಂಡಿದ್ದಾರೆ. ನಿರಂತರವಾಗಿ ಮೂರು ದಿವಸ ಸುರಿದ ಮಳೆ ಶುರುವಾಗಿರುವುದರಿಂದ ರೈತರು ಬಿತ್ತನೆ ಮಾಡಬೇಕೆಂದು ಯೋಚಿಸುತ್ತಲೆ ಇದಾರೆ. ಆದರೆ ಬೀದರ ನಗರ ಸೇರಿದಂತೆ ತಾಲೂಕ ಮಟ್ಟದಲ್ಲಿ ಸೋಯಾ ಬೀನ್ ಬಿಜ ಸಿಗದೆ ರೈತರು ರೈತ ಸಂಪರ್ಕ ಕೇಂದ್ರಗಳಲ್ಲಿ ಬೀಜಕ್ಕಾಗಿ ಪರದಾಡುವಂತಹ ಪರಿಸ್ಥಿತಿ ಎದುರುವಾಗಿದೆ. ಜಿಲ್ಲೆಯಲ್ಲಿ ಮುಂಗಾರು ಬಿತ್ತನೆಗು ಮುಂಚೆ ಸೋಯಾ ಬೀಜಗಳ ಕೊರತೆ ಆಗಿದೆ. ನಿತ್ಯ ರೈತ ಸಂಪರ್ಕ ಕೇಂದ್ರಗಳಲ್ಲಿ ತೆರಳಿದರೆ […]

Advertisement

Wordpress Social Share Plugin powered by Ultimatelysocial