ಮಧುಗಿರಿ – ತುಮಕೂರು ಹಾಲು ಒಕ್ಕೂಟದಿಂದ ಬರುವ ಅನೇಕ ಸವಲತ್ತುಗಳನ್ನು ಹಾಲು ಉತ್ಪಾದಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ತುಮುಲ್ ನಿರ್ದೇಶಕ ಕೊಂಡವಾಡಿ ಚಂದ್ರಶೇಖರ್ ತಿಳಿಸಿದರು. ಪಟ್ಟಣದ ತುಮುಲ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ವಿವಿಧ ಯೋಜನೆಯಡಿ ಪಲಾನುಭವಿಗಳಿಗೆ ಸವಲತ್ತು ವಿತರಣಾ ಕಾರ್ಯಕ್ರಮದಲ್ಲಿ ಚೆಕ್ಗಳನ್ನು ವಿತರಿಸಿ ಬಳಿಕ ಮಾತನಾಡಿದ ಅವರು, ಮರಣ ಹೊಂದಿದ ಹಾಲು ಉತ್ಪಾದಕರ ಕುಟುಂಬಕ್ಕೆ ಒಕ್ಕೂಟದ ವತಿಯಿಂದ 50 ಸಾವಿರ ರೂ ಪರಿಹಾರ ನೀಡುತ್ತಿದ್ದು, ಈ ಹಣವನ್ನು ಕುಟುಂಬದವರು ಸದುಪಯೋಗಪಡಿಸಿಕೊಳ್ಳಬೇಕು.
ಕೊರೊನಾ ಸಾಂಕ್ರಮಿಕ ರೋಗ ಹರಡುತ್ತಿರವ ಹಿನ್ನಲೆಯಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಶೋಚನೀಯ ಸ್ಥಿತಿಗೆ ತಲುಪುತ್ತಿದ್ದು, ಇಂತಹ ಸಂಕಷ್ಟದ ಸಮಯದಲ್ಲಿ ಹೈನುಗಾರಿಕೆಯನ್ನು ಅವಲಂಬಿತರಾಗಿದ್ದ, ರೈತರು ಸ್ವಲ್ಪ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ. ರೈತರು ಕಲಬೆರಿಕೆ ಮುಕ್ತ ಗುಣಮಟ್ಟದ ಹಾಲನ್ನು ನೀಡಿ ಒಕ್ಕೂಟದ ಅಭಿವೃದ್ದಿಗೆ ಸಹಕರಿಸಬೇಕು ಎಂದು ತಿಳಿಸಿದರು.