ಹಾಲು ಒಕ್ಕೂಟದ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳಿ-ತುಮುಲ್ ನಿರ್ದೇಶಕ ಕೊಂಡವಾಡಿ ಚಂದ್ರಶೇಖರ್ ಹೇಳಿಕೆ

ಮಧುಗಿರಿ – ತುಮಕೂರು ಹಾಲು ಒಕ್ಕೂಟದಿಂದ ಬರುವ ಅನೇಕ ಸವಲತ್ತುಗಳನ್ನು ಹಾಲು ಉತ್ಪಾದಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ತುಮುಲ್ ನಿರ್ದೇಶಕ ಕೊಂಡವಾಡಿ ಚಂದ್ರಶೇಖರ್ ತಿಳಿಸಿದರು. ಪಟ್ಟಣದ ತುಮುಲ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ವಿವಿಧ ಯೋಜನೆಯಡಿ ಪಲಾನುಭವಿಗಳಿಗೆ ಸವಲತ್ತು ವಿತರಣಾ ಕಾರ್ಯಕ್ರಮದಲ್ಲಿ ಚೆಕ್‌ಗಳನ್ನು ವಿತರಿಸಿ ಬಳಿಕ ಮಾತನಾಡಿದ ಅವರು, ಮರಣ ಹೊಂದಿದ ಹಾಲು ಉತ್ಪಾದಕರ ಕುಟುಂಬಕ್ಕೆ ಒಕ್ಕೂಟದ ವತಿಯಿಂದ 50 ಸಾವಿರ ರೂ ಪರಿಹಾರ ನೀಡುತ್ತಿದ್ದು, ಈ ಹಣವನ್ನು ಕುಟುಂಬದವರು ಸದುಪಯೋಗಪಡಿಸಿಕೊಳ್ಳಬೇಕು.

ಕೊರೊನಾ ಸಾಂಕ್ರಮಿಕ ರೋಗ ಹರಡುತ್ತಿರವ ಹಿನ್ನಲೆಯಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಶೋಚನೀಯ ಸ್ಥಿತಿಗೆ ತಲುಪುತ್ತಿದ್ದು, ಇಂತಹ ಸಂಕಷ್ಟದ ಸಮಯದಲ್ಲಿ ಹೈನುಗಾರಿಕೆಯನ್ನು ಅವಲಂಬಿತರಾಗಿದ್ದ, ರೈತರು ಸ್ವಲ್ಪ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ. ರೈತರು ಕಲಬೆರಿಕೆ ಮುಕ್ತ ಗುಣಮಟ್ಟದ ಹಾಲನ್ನು ನೀಡಿ ಒಕ್ಕೂಟದ ಅಭಿವೃದ್ದಿಗೆ ಸಹಕರಿಸಬೇಕು ಎಂದು ತಿಳಿಸಿದರು.

Please follow and like us:

Leave a Reply

Your email address will not be published. Required fields are marked *

Next Post

ಗುಂಡಲಬಂಡ ಜಲಪಾತದಲ್ಲಿ ಕೊಚ್ಚಿಹೋದ ತಂದೆ ಮಗ

Fri Jul 24 , 2020
ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲ್ಲೂಕಿನ ಬಳಿ ಇರುವ ಗುಂಡಲಬಂಡ ಜಲಪಾತಕ್ಕೆ ಈಜಲು ಹೋಗಿದ್ದ ನಾಲ್ಕು ಮಂದಿ ನೀರಿನ ಮಧ್ಯೆಯೆ ಸಿಲುಕಿಕೊಂಡಿದ್ದಾರೆ. ಗುಂಡಲಬಂಡ ಜಲಪಾತಕ್ಕೆ ಪ್ರವಾಸಕ್ಕೆಂದು ಬಂದಿದ್ದ ನಾಲ್ವರು ದೇವದುರ್ಗ ತಾಲ್ಲೂಕಿನ ಮೂಡಲಗುಂಡ ಗ್ರಾಮದವರು ಎಂದು ತಿಳಿದು ಬಂದಿದೆ. ಈಜಲು ಹೋದ ನಾಲ್ಕು ಜನರಲ್ಲಿ  ತಂದೆ ಮಗ ಇಬ್ಬರು ನೀರಲ್ಲಿ ಸಿಗದಂತೆ ಕೊಚ್ಚಿಕೊಂಡು ಹೋಗಿದ್ದಾರೆ. ಒಬ್ಬ ನೀರಿನ ಮಧ್ಯೆ ಸಿಲುಕಿಕೊಂಡಿದ್ದು, ಮತ್ತೋರ್ವ ನೀರಿನಲ್ಲಿ ಈಜಿಕೊಂಡು ದಡ ಸೇರಿಕೊಂಡಿದ್ದಾನೆ. ಘಟನೆ ನಡೆದ ಸ್ಥಳಕ್ಕೆ […]

Advertisement

Wordpress Social Share Plugin powered by Ultimatelysocial