ಪಂಜಾಬ್ ಸಿಎಂ ಅಮರೀಂದರ್ ಹುತಾತ್ಮರಾದ ವೀರ ಸೈನಿಕನಿಗೆ ನಮಸ್ಕರಿಸುತ್ತೇನೆ ಮತ್ತು ಅವರ ಕುಟುಂಬಕ್ಕೆ ಸಂತಾಪ ತಿಳಿಸುತ್ತೇನೆ ಎಂದು ಹೇಳಿದ್ದಾರೆ . ಭಾರತ- ಚೀನಾ ಗಡಿ ಸಂಘರ್ಷದಲ್ಲಿ ಹುತಾತ್ಮರಾದ ಲ್ಯಾನ್ಸ್ ನಾಯಕ ಸಲೀಮ್ ಖಾನ್ ಅವರು ಪಟಿಯಾಲ ಜಿಲ್ಲೆಯ ಮರ್ದಾಹೇರಿ ಗ್ರಾಮಕ್ಕೆ ಸೇರಿದವರು. ಇವರ ಕುಟುಂಬಕ್ಕೆ50 ಲಕ್ಷ ರೂ. ಪರಿಹಾರ ಮತ್ತು ಕುಟುಂಬದಲ್ಲಿ ಒಬ್ಬರಿಗೆ ಸರ್ಕಾರಿ ಕೆಲಸ ನೀಡುವುದಾಗಿ ಘೋಷಿಸಿದ್ದಾರೆ. ಹುತಾತ್ಮರಾದ ಸುದ್ದಿ ಕೇಳಿ ಬೇಸರವಾಯಿತು, ಸೈನಿಕನ ಕುಟುಂಬಕ್ಕೆ ರಾಜ್ಯಸರ್ಕಾರ ಸಾಧ್ಯವಿರುವ ಎಲ್ಲ ಸಹಾಯ ಮತ್ತು ಬೆಂಬಲ ನೀಡುತ್ತದೆ ಎಂದು ಹೇಳಿದ್ದಾರೆ.