ಎಸ್ಎಸ್ಎಲ್ಸಿ ಪರೀಕ್ಷೆ ಹಾಗೂ ಆನ್ಲೈನ್ ಶಿಕ್ಷಣ ರದ್ದುಗೊಳಿಸುವಂತೆ ವಾಟಾಳ್ ನಾಗರಾಜ್ ಹುಬ್ಬಳ್ಳಿಯ ಚನ್ನಮ್ಮ ವೃತ್ತದ ಬಳಿ ಜಾಗಟೆ ಭಾರಿಸಿ ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಎಸ್ ಸುರೇಶ್ ಕುಮಾರ್ ಹಠಕ್ಕೆ ಬಿದ್ದು ಎಸ್ಎಸ್ಎಲ್ಸಿ ಪರೀಕ್ಷೆ ಮಾಡಲು ಹೊರಟಿದ್ದಾರೆ. ಕೊರೊನಾ ಪ್ರಕರಣ ಕಡಿಮೆ ಇದ್ದ ವೇಳೆ ಲಾಕ್ಡೌನ್ ಮಾಡಿದ್ರು. ಕೊರೊನಾ ಅಟ್ಟಹಾಸ ಮೆರೆಯುವ ವೇಳೆ ಓಪನ್ ಮಾಡಿದ್ದಾರೆ. ಎಸ್ಎಸ್ಎಲ್ಸಿ ಪರೀಕ್ಷೆ ನಂತರ ಮೌಲ್ಯಮಾಪನ ಮಾಡುವ ಶಿಕ್ಷಕರ ಭವಿಷ್ಯದ ಪ್ರಶ್ನೆ ಎದುರಾಗಿದೆ. ರಾಜ್ಯದಲ್ಲಿ ಪರೀಕ್ಷೆ ನಡೆಸದೇ ವಿದ್ಯಾರ್ಥಿಗಳನ್ನು ಪಾಸ್ ಮಾಡಬೇಕು. ಪ್ರಾಥಮಿಕ ಹಂತದಿAದ ಡಿಗ್ರಿಯವರೆಗೂ ಆನ್ಲೈನ್ ಶಿಕ್ಷಣ ಮಾಡೋದು ಬೇಡ ಎಂದು ವಿರೋಧ ವ್ಯಕ್ತಪಡಿಸಿದರು. ಸದ್ಯ ಕರ್ನಾಟಕವನ್ನು ಅಮೇರಿಕಾ ಮಾಡಲು ಆಗಲ್ಲ. ಕೊರೊನಾ ವೈರಸ್ ವೇಳೆ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡಿಲ್ಲ. ಹೀಗಾಗಿ ಪರೀಕ್ಷೆಗಳನ್ನು ನಡೆಸುವುದು ಸರಿಯಲ್ಲ ಎಂದು ಹೇಳಿದರು.
ಹುಬ್ಬಳ್ಳಿಯ ಚನ್ನಮ್ಮ ವೃತ್ತದ ಬಳಿ ಜಾಗಟೆ ಭಾರಿಸಿ ಪ್ರತಿಭಟನೆ
Please follow and like us: