ಪತ್ನಿ ನನ್ನೊಂದಿಗೆ ಸರಿಯಾಗಿ ವರ್ತಿಸುತ್ತಿಲ್ಲ. ಮಗಳು ಕೂಡ ನನ್ನನ್ನು ಅಪ್ಪ ಅನ್ನುತ್ತಿಲ್ಲ ಎಂದು ಮನನೊಂದ ವ್ಯಕ್ತಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.ಈ ಘಟನೆ ಕನಕಪುರದಲ್ಲಿ ನಡೆದಿದ್ದು, ಈಶ್ವರ್(55) ಸಾವನ್ನಪ್ಪಿದ ವ್ಯಕ್ತಿ ಎಂದು ಗುರುತಿಸಲಾಗಿದೆ.ಇವರು ಆರ್ಟ್ ಆಫ್ ಲಿವಿಂಗ್ ನಲ್ಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಪತ್ನಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದೇನೆ ಎಂದು ಡೆತ್ ನೋಟ್ ನಲ್ಲಿ ಬರೆದಿದ್ದಾರೆ.ಅಲ್ಲದೇ, ಒಟ್ಟು 12 ಜನರ ವಿರುದ್ಧ ಆರೋಪ ಮಾಡಿ ಅವರ ಹೆಸರನ್ನು ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ. ಪತ್ನಿ ನನ್ನನ್ನು ಸರಿಯಾಗಿ ನೋಡಿಕೊಳ್ಳುತ್ತಿರಲಿಲ್ಲ. ಮಗಳಿಗೂ ನನ್ನ ಮೇಲೆ ಪ್ರೀತಿ ಇರಲಿಲ್ಲ. ಅವಳು ಅಪ್ಪಾ ಎಂದು ಕರೆಯುತ್ತಲೇ ಇರಲಿಲ್ಲ. ನನ್ನ ಸಂಬಂಧಿಕರು ಕೂಡ ಉತ್ತಮರಲ್ಲ ಎಂದು ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ.ಡೆತ್ ನೋಟ್ ನಲ್ಲಿ ಜಯನಗರ ಪೊಲೀಸ್ ಠಾಣೆಯ ಎಸಿಪಿ ಅವರ ವಿರುದ್ಧವೂ ಬರೆದಿದ್ದಾರೆ. ನನ್ನ ವಿರುದ್ಧ ಪತ್ನಿ ಸುಳ್ಳು ದೂರು ದಾಖಲಿಸಿದಾಗ, ಸರಿಯಾಗಿ ವಿಚಾರಣೆ ನಡೆಸದೆ, ನನ್ನನ್ನು ಠಾಣೆಗೆ ಕರೆಯಿಸಿದ್ದರು. ಹೀಗಾಗಿಯೇ ನಾನು ಆತ್ಮಹತ್ಯೆ ನಿರ್ಧಾರಕ್ಕೆ ಬಂದಿದ್ದೇನೆ ಎಂದು ಬರೆದುಕೊಂಡಿದ್ದಾರೆ.ಪತ್ನಿ, ಸ್ನೇಹಿತರು, ಸಂಬಂಧಿಕರು, ಜಯನಗರ ಎಸಿಪಿ ಸೇರಿದಂತೆ 12 ಜನರ ಹೆಸರು ಡೆತ್ ನೋಟ್ ನಲ್ಲಿದೆ. ಮೃತ ಈಶ್ವರ್ ಅವರ ಸಹೋದರ ಈ ಕುರಿತು ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಸಾವಿಗೆ ಕಾರಣರಾದವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada