ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವದರಿಂದ ಹುಬ್ಬಳ್ಳಿಯಲ್ಲಿ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಹೀಗಾಗಿ ಎಸ್ಎಸ್ಎಲ್ ಸಿ ಮೌಲ್ಯಮಾಪನಕ್ಕೆ ತೆರಳಬೇಕಿದ್ದ ಶಿಕ್ಷಕರು ಪರದಾಡುವಂತಾಗಿದೆ. ಕಳೆದ ಮೂರು ದಿನಗಳಿಂದ ಧಾರವಾಡದಲ್ಲಿ ಮೌಲ್ಯಮಾಪನ ನಡೆದಿದೆ. ಆದರೆ ಇಂದು ಧಾರವಾಡಕ್ಕೆ ತೆರಳುವ ಶಿಕ್ಷಕರಿಗೆ ಬಸ್ ಇಲ್ಲ. ಲಾಕ್ ಡೌನ್ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಬಸ್ ವ್ಯವಸ್ಥೆ ಮಾಡಬೇಕಿತ್ತು. ಹುಬ್ಬಳ್ಳಿಯ ೨೦೦ಕ್ಕೂ ಹೆಚ್ಚು ಶಿಕ್ಷಕರು ಧಾರವಾಡದ ಸೆಂರ್ಗೆ ತಲುಪಿಸುವ ವ್ಯವಸ್ಥೆ ಮಾಡಬೇಕಿತ್ತು. ಆದರೆ ಬಸ್ ಇಲ್ಲದೆ ಹುಬ್ಬಳ್ಳಿಯ ಹಳೆ ಬಸ್ ನಿಲ್ದಾಣದ ಎದುರು ಶಿಕ್ಷಕರು ಬಸ್ ಗಾಗಿ ಕಾಯುತ್ತಿದ್ದಾರೆ.
೩ ದಿನಗಳಿಂದ ಧಾರವಾಡದಲ್ಲಿ ಮೌಲ್ಯಮಾಪನ ನಡೆದಿದೆ
Please follow and like us: