ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹೊಸೂರು ಸಿದ್ದಾಪುರ ಗ್ರಾಮ ಪಂಚಾಯತಿಯಲ್ಲಿ ಕಳೆದ ಒಂದು ವಾರದಿಂದ ಸುಮಾರು ೮೦೦ಜನ ಕೂಲಿಕಾರ್ಮಿಕರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡಲಾಗಿದೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಂಕರ್ ಹೇಳಿದ್ದಾರೆ. ರಾಯಚೂರನಲ್ಲಿ ಮಾತನಾಡಿದ ಅವರು,ಲಾಕ್ ಡೌನ್ ನಿಂದ ಕಾರ್ಮಿಕರಿಗೆ ಕೈಗಳಿಗೆ ಕೆಲಸ ಇಲ್ಲದೆ ಕಂಗಾಲಾಗಿದ್ದರು.ಪAಚಾಯಿತಿಗೆ ಅರ್ಜಿ ಸಲ್ಲಿಸಿದ ಪ್ರತಿಯೊಬ್ಬ ಕೂಲಿಕಾರರಿಗೆ ಕೆಲಸ ನೀಡಲಾಗುತ್ತಿದೆ, ರೈತರಿಗೆ ಅನುಕೂಲವಾಗುವ ಕೃಷಿ ಹೊಂಡ,ಬದು ನಿರ್ಮಾಣ, ಕೆರೆ ನಿರ್ಮಾಣ, ಗೋಕುಂಟೆ ಸೇರಿದಂತೆ ಅನೇಕ ಕೆಲಸಗಳನ್ನು ಈಗಾಗಲೇ ನೀಡಲಾಗಿದೆ. ಸುಮಾರು ೪೦ಗುಂಪುಗಳು ಕೆಲಸ ಮಾಡುತ್ತಿದ್ದು ಕೆಲಸ ಮಾಡುವ ಕೂಲಿಕಾರ್ಮಿಕರಿಗೆ ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಕರ್ಯ ಒದಗಿಸಲಾಗಿz ಎಂದು ಹೇಳಿದರುೆ. ಈ ಸಂದರ್ಭದಲ್ಲಿ ಜೆಇ ಸೋಮಶೇಖರ್, ಮೇಟಿಗಳಾದ ರಂಗಪ್ಪ, ಮಹೇಂದ್ರ, ಸಿದ್ದಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
೮೦೦ ಕೂಲಿಕಾರ್ಮಿಕರಿಗೆ ಕೆಲಸ- ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಂಕರ್ ಹೇಳಿಕೆ
Please follow and like us: