೮೦೦ ಕೂಲಿಕಾರ್ಮಿಕರಿಗೆ ಕೆಲಸ- ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಂಕರ್ ಹೇಳಿಕೆ

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹೊಸೂರು ಸಿದ್ದಾಪುರ ಗ್ರಾಮ ಪಂಚಾಯತಿಯಲ್ಲಿ ಕಳೆದ ಒಂದು ವಾರದಿಂದ ಸುಮಾರು ೮೦೦ಜನ ಕೂಲಿಕಾರ್ಮಿಕರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡಲಾಗಿದೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಂಕರ್ ಹೇಳಿದ್ದಾರೆ. ರಾಯಚೂರನಲ್ಲಿ ಮಾತನಾಡಿದ ಅವರು,ಲಾಕ್ ಡೌನ್ ನಿಂದ ಕಾರ್ಮಿಕರಿಗೆ ಕೈಗಳಿಗೆ ಕೆಲಸ ಇಲ್ಲದೆ ಕಂಗಾಲಾಗಿದ್ದರು.ಪAಚಾಯಿತಿಗೆ ಅರ್ಜಿ ಸಲ್ಲಿಸಿದ ಪ್ರತಿಯೊಬ್ಬ ಕೂಲಿಕಾರರಿಗೆ ಕೆಲಸ ನೀಡಲಾಗುತ್ತಿದೆ, ರೈತರಿಗೆ ಅನುಕೂಲವಾಗುವ ಕೃಷಿ ಹೊಂಡ,ಬದು ನಿರ್ಮಾಣ, ಕೆರೆ ನಿರ್ಮಾಣ, ಗೋಕುಂಟೆ ಸೇರಿದಂತೆ ಅನೇಕ ಕೆಲಸಗಳನ್ನು ಈಗಾಗಲೇ ನೀಡಲಾಗಿದೆ. ಸುಮಾರು ೪೦ಗುಂಪುಗಳು ಕೆಲಸ ಮಾಡುತ್ತಿದ್ದು ಕೆಲಸ ಮಾಡುವ ಕೂಲಿಕಾರ್ಮಿಕರಿಗೆ ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಕರ್ಯ ಒದಗಿಸಲಾಗಿz ಎಂದು ಹೇಳಿದರುೆ. ಈ ಸಂದರ್ಭದಲ್ಲಿ ಜೆಇ ಸೋಮಶೇಖರ್, ಮೇಟಿಗಳಾದ ರಂಗಪ್ಪ, ಮಹೇಂದ್ರ, ಸಿದ್ದಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Please follow and like us:

Leave a Reply

Your email address will not be published. Required fields are marked *

Next Post

ಎನ್‌ಕೌಂಟರ್‌ನಲ್ಲಿ ಉಗ್ರ ಹತ್ಯೆ

Tue Jul 7 , 2020
ಪುಲ್ವಾಮ ಪ್ರದೇಶದಲ್ಲಿ ಇಂದು ಮುಂಜಾನೆ ನಡೆದ ಎನ್ ಕೌಂಟರ್ ನಲ್ಲಿ ಒಬ್ಬ ಉಗ್ರ ಹತ್ಯೆಯಾಗಿದ್ದು, ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ. ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಸೇನೆ ಹಾಗೂ ಉಗ್ರರ ನಡುವೆ ಗುಂಡಿನ ಕಾಳಗ ದಿನೇ ದಿನೇ ಹೆಚ್ಚಾಗುತ್ತಿದೆ. ಕಣಿವೆ ರಾಜ್ಯದಲ್ಲಿ ಹೆಚ್ಚುತ್ತಿರುವ ಪಾಕಿಸ್ತಾನ ಪ್ರೇರಿತ ಉಗ್ರಗಾಮಿಗಳನ್ನು ನೆಲಸಮ ಮಾಡಲು ಭಾರತೀಯ ಯೋಧರು ಕಾರ್ಯಚರಣೆ ನಡೆಸುತ್ತಿದ್ದಾರೆ.ಪುಲ್ವಾಮ ಜಿಲ್ಲೆಯ ಗುಸ್ಸೂ ಪ್ರದೇಶದಲ್ಲಿ ಉಗ್ರರು ಅವಿತುಕೊಂಡಿರುವ ಮಾಹಿತಿ ಮೇರೆಗೆ ಭದ್ರತಾ ಪಡೆಗಳು, ಪೊಲೀಸ್ ಸಿಬ್ಬಂದಿ […]

Advertisement

Wordpress Social Share Plugin powered by Ultimatelysocial