1 ವರ್ಷದಲ್ಲಿ ಬಿಜೆಪಿ ಸಾಧನೆ ಶೂನ್ಯ

ಕಳೆದ ಒಂದು ವರ್ಷದಲ್ಲಿ ವರ್ಗಾವಣೆ ದಂಧೆ ನಡೆಸಿರುವುದನ್ನು ಬಿಟ್ಟರೆ ಬಿಜೆಪಿ ಸರ್ಕಾರದ ಸಾಧನೆ ಬೇರೇನೂ ಇಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಕೆ ಕುಮಾರಸ್ವಾಮಿ ಟೀಕಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಒಂದು ವರ್ಷವನ್ನು ಪೂರೈಸಿದೆ. ಆದರೆ ರಾಜ್ಯದ ಜನರನ್ನು ತೀವ್ರ ಸಂಕಷ್ಟಕ್ಕೆ ಈಡು ಮಾಡಿರುವ ಕೊರೊನಾ ನಿರ್ವಹಣೆ ಮಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಒಂದು ವರ್ಷದಲ್ಲಿ ರಾಜ್ಯದ ಅಭಿವೃದ್ಧಿಯನ್ನು ಕಡೆಗಣಿಸಲಾಗಿದೆ. ಹಿಂದಿನ ಸರ್ಕಾರ ಮಂಜೂರು ಮಾಡಿದ್ದ ಯೋಜನೆಗಳಿಗೂ ಹಣವನ್ನು ನೀಡಿಲ್ಲ. ಯಾವುದೇ ಅಭಿವೃದ್ಧಿ ಕಾರ್ಯಗಳು ರಾಜ್ಯದಲ್ಲಿ ಆಗಿಲ್ಲ ಎಂದು ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಬಿಜೆಪಿ ಸರ್ಕಾರದ ಆಡಳಿತಕ್ಕೆ ಒಂದು ವರ್ಷ

Sun Jul 26 , 2020
ಬಿಜೆಪಿ ಸರ್ಕಾರಕ್ಕೆ ಒಂದು ವರ್ಷ ಪೂರೈಸುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಪ್ರಜಾಪ್ರಭುತ್ವ ಉಳಿಸಿ-ಸಂವಿಧಾನ ರಕ್ಷಿಸಿ ಹೆಸರಿನಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.ನಾಳೆ ಮಧ್ಯಾಹ್ನ ರಾಜಭವನದ ಮುಂದೆ ಕಾಂಗ್ರೆಸ್ ಸಂಸದರು,ಶಾಸಕರು,ಮಾಜಿ ಶಾಸಕರು,ಮಾಜಿ ಸಂಸದರು, ಪಕ್ಷದ ಪ್ರಮುಖ ನಾಯಕರು,ಪದಾಧಿಕಾರಿಗಳು ಪ್ರತಿಭಟನೆ ನಡೆಸಲಿದ್ದಾರೆ.ಬಿಜೆಪಿ ಸರ್ಕಾರ ಕಳೆದ ಒಂದು ವರ್ಷದಲ್ಲಿ ಅತಿವೃಷ್ಟಿ,ಬರ,ಹಾಗೂ ಕೊರೋನಾವನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ.ಆದರೆ ಸರ್ಕಾರ ಸಾಧನೆ ಸಮಾವೇಶ ನಡೆಸಲು ಮುಂದಾಗಿರುವುದನ್ನು ಖಂಡಿಸಿ ,ಪ್ರಜಾಪ್ರಭುತ್ವ ಉಳಿಸಿ ಎಂಬ ಹೆಸರಿನಲ್ಲಿ ಹೋರಾಟಕ್ಕಿಳಿದಿದೆ. Please follow and like us:

Advertisement

Wordpress Social Share Plugin powered by Ultimatelysocial