ಗುಜರಾತ್‍ನ ಸೋಮನಾಥ ದೇವಸ್ಥಾನಕ್ಕೆ 1.51 ಕೋಟಿ ರೂ. ದೇಣಿಗೆ ನೀಡಿದ ಮುಖೇಶ್ ಅಂಬಾನಿ!

ಹಮದಾಬಾದ್: ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ್ ಅಂಬಾನಿ ಗುಜರಾತ್‍ನ ಸೋಮನಾಥ ದೇವಾಲಯದ ಟ್ರಸ್ಟ್‌ಗೆ 1.51 ಕೋಟಿ ರೂ. ದೇಣಿಗೆ ನೀಡಿದ್ದಾರೆ.

ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿದ ಮುಖೇಶ್ ಅಂಬಾನಿ ದೇವರ ದರ್ಶನ ಪಡೆದರು.

ಈ ವೇಳೆ ಮುಖೇಶ್ ಅಂಬಾನಿ ಪುತ್ರ ಆಕಾಶ್ ಅಂಬಾನಿ ಭಾಗಿಯಾಗಿದ್ದರು. ಅವರನ್ನು ದೇವಸ್ಥಾನದ ಟ್ರಸ್ಟ್‌ನ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಸ್ವಾಗತಿಸಿದರು. ಈ ವೇಳೆ ಮುಖೇಶ್ ಅಂಬಾನಿ ಹಾಗೂ ಆಕಾಶ್ ಅಂಬಾನಿ ಶಿವಲಿಂಗಕ್ಕೆ ಅಭಿಷೇಕ ಮಾಡಿ ಪ್ರಾರ್ಥಿಸಿದರು.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಮುಖೇಶ್ ಅಂಬಾನಿ ಆಂಧ್ರಪ್ರದೇಶದ ತಿರುಮಲದಲ್ಲಿರುವ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದ ವೇಳೆ 1.5 ಕೋಟಿ ರೂ. ಕಾಣಿಕೆ ಸಲ್ಲಿಸಿದ್ದರು. ಈ ವೇಳೆ ರಾಧಿಕಾ ಮರ್ಚೆಂಟ್ ಮತ್ತು ರಿಲಯನ್ಸ್ ರಿಟೇಲ್ ಲಿಮಿಟೆಡ್ ನಿರ್ದೇಶಕ ಮನೋಜ್ ಮೋದಿ ಜೊತೆಗಿದ್ದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

"ರಿಕ್ಷಾ ರಿಪೇರಿ ಮಾಡುವ ಇಂಜಿನಿಯರ್ ಅವನು, ಫೇಲ್ ಆಗಿ ಮತ್ ಪಾಸ್ ಆಗಿದ್ದಾನೆ"

Sun Feb 19 , 2023
ಚನ್ನರಾಜ ಹಟ್ಟಿಹೊಳಿ ಬ್ಯಾಗ್ ಹಿಡಿದವ, ಮನೆ ಬಾಗಿಲು ಕಾದವ ಮತ್ತು ಡ್ರೈವಿಂಗ್ ಮಾಡಿದ ಅವನು ನನ್ನ ಲೇವಲ್ ಅಲ್ಲಾ. ಏಳು ದೇಶಕ್ಕೆ ಹೋಗಿ ಬಂದು ನಾನು ಇಂಜಿನಿಯರ್ ಅಂತಾನೆ. ಪಾನಾ ಹಿಡಿಯುವ ಇಂಜಿನಿಯರ್ ಅವನು, ರಿಕ್ಷಾ ರಿಪೇರಿ ಮಾಡುವ ಇಂಜಿನಿಯರ್ ಅವನು.” ಚನ್ನರಾಜ ಹಟ್ಟಿಹೊಳಿ ವಿರುದ್ಧ ರಮೇಶ್ ಜಾರಕಿಹೊಳಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿ: ರಮೇಶ್ ಜಾರಕಿಹೊಳಿಗೂ  ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೂ ಏನು ಸಂಬಂಧ? ರಮೇಶ್ ವಿರುದ್ಧ ಹಕ್ಕು ಚ್ಯುತಿ […]

Advertisement

Wordpress Social Share Plugin powered by Ultimatelysocial