ಬೆಂಗಳೂರು : ರಾಜ್ಯದಲ್ಲಿ H3N2 ವೈರಸ್ ಪ್ರಕರಣಗಳು ಆತಂಕ ಹೆಚ್ಚಿಸಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಎಲ್ಲ ಜಿಲ್ಲೆಗಳಲ್ಲಿ ಇಂದಿನಿಂದ ಕ್ಲಿನಿಕಲ್ ಅಡಿಟ್ ನಡೆಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ.
ದೇಶದಲ್ಲಿ H3N2 ವೈರಸ್ ಸೋಂಕಿನ ಆತಂಕ ಹೆಚ್ಚಾಗಿದ್ದು, ಕರ್ನಾಟಕದ ಬಳಿಕ ಹರಿಯಾಣದಲ್ಲಿ H3N2 ವೈರಸ್ ಗೆ ಮತ್ತೊಂದು ಬಲಿಯಾಗಿದೆ.
ಈ ಮೂಲಕ ದೇಶದಲ್ಲಿ H3N2 ಗೆ ಬಲಿಯಾದವರ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ.
H3N2 ವೈರಸ್ ನಿಂದ ಇಬ್ಬರು ಸಾವನ್ನಪ್ಪಿದ್ದ ಬೆನ್ನಲ್ಲೇ ಆರೋಗ್ಯ ಇಲಾಖೆ ಎಚ್ಚೆತ್ತಿದ್ದು, H3N2 ವೈರಸ್ ನ ಮೂಲ ಪತ್ತೆಗೆ ಕ್ಲಿನಿಕ್ ಆಡಿಟ್ ಗೆ ಮುಂದಾಗಿದೆ. ಬೆಂಗಳೂರು ಸೇರಿದಂತೆ ಎಲ್ಲ ಜಿಲ್ಲೆಗಳಲ್ಲಿ ನಾಳೆಯಿಂದ ಕ್ಲಿನಿಕಲ್ ಆಡಿಟ್ ಆರಂಭಿಸಲಾಗಿದೆ. ದೇಶದಲ್ಲಿ ಈವರೆಗೆ 90 H3N2 ವೈರಸ್ ಪ್ರಕರಣಗಳು ಪತ್ತೆಯಾಗಿವೆ. ಹೀಗಾಗಿ ಕ್ಲಿನಿಕಲ್ ಆಡಿಟ್ ನಡೆಸಿ ಸೋಂಕು ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ನಿರ್ಧರಿಸಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada