ನನ್ನ ಅನುಮತಿ ಇಲ್ಲದೆ ಇನ್ಮುಂದೆ ಯಾವುದೇ ವರ್ಗಾವಣೆ ಮಾಡುವಂತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಪರ ಆದೇಶ ಹೊರಡಿಸಿರೋ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಯಾವುದೇ ಇಲಾಖೆಯೂ ಮುಖ್ಯಮಂತ್ರಿಗಳ ಅನುಮೋದನೆ ಇಲ್ಲದೆ ವರ್ಗಾವಣೆ ಮಾಡಬಾರದು. ಅದು ಅವಧಿಪೂರ್ವ ವರ್ಗಾವಣೆ ಆಗಿರಲಿ, ಸಾಮಾನ್ಯ ವರ್ಗಾವಣೆ ಆಗಿರಲಿ, ಯಾವುದೇ ಮಾಡುವಂತಿಲ್ಲ. ಸರ್ಕಾರಿ ನೌಕರರನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ, ಒಂದು ಇಲಾಖೆಯಿಂದ ಮತ್ತೊಂದು ಇಲಾಖೆಗೆ ವರ್ಗಾಯಿಸೋ ಮುನ್ನ ಸಚಿವರು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಸಿಎಂ ಗಮನಕ್ಕೆ ತಂದು ಅನುಮೋದನೆ ಪಡೆಯಬೇಕು ಎಂದು ಬರೆದಿದ್ದಾರೆ.