ಭೋಪಾಲ್: ಸ್ವಾಮಿ ವಿವೇಕಾನಂದ ಮತ್ತು ಲೋಕಮಾನ್ಯ ತಿಲಕರಿಗೆ ಸ್ಫೂರ್ತಿ ನೀಡಿದ ಸನಾತನ ಧರ್ಮವನ್ನು ಈ ಇಂಡಿಯಾ ಮೈತ್ರಿಕೂಟದ (INDIA Alliance) ಜನರು ಅಳಿಸಿ ಹಾಕಲು ಬಯಸುತ್ತಿದ್ದಾರೆ. ಈ ಒಕ್ಕೂಟವು ಸನಾತನ ಧರ್ಮವನ್ನು (Sanatan Dharma Row) ನಾಶ ಮಾಡಲು ಬಯಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ವಿಪಕ್ಷಗಳ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಒಕ್ಕೂಟದ ನಾಯಕರು ಬಹಿರಂಗವಾಗಿ ಸನಾತನ ಧರ್ಮವನ್ನು ಗುರಿಯಾಗಿಸಲು ಆರಂಭಿಸಿದ್ದಾರೆ. ನಾಳೆ ನಮ್ಮ ಮೇಲೆ ದಾಳಿಯನ್ನು ಹೆಚ್ಚಿಸುತ್ತಾರೆ. ದೇಶದಾದ್ಯಂತ ಎಲ್ಲಾ ಸನಾತನಿಗಳು ಮತ್ತು ನಮ್ಮ ದೇಶವನ್ನು ಪ್ರೀತಿಸುವ ಜನರು ಎಚ್ಚೆತ್ತುಕೊಳ್ಳಬೇಕು. ಅಂತಹವರನ್ನು ನಾವು ತಡೆಯಬೇಕು ಎಂದು ಕರೆ ನೀಡಿದರು.

NDIA ಒಕ್ಕೂಟಕ್ಕೆ INDI ಎಂದು ಕರೆದ ಪ್ರಧಾನಿ ಮೋದಿ, INDI ಒಕ್ಕೂಟಕ್ಕೆ ನಾಯಕರಿಲ್ಲ. ಭಾರತದ ಸಂಸ್ಕೃತಿಯ ಮೇಲೆ ದಾಳಿ ಮಾಡಲು ಗುಪ್ತ ಕಾರ್ಯಸೂಚಿಯನ್ನು ಮಾಡಿದೆ. ಸನಾತನ ಸಂಸ್ಕೃತಿಯನ್ನು ಕೊನೆಗೊಳಿಸುವ ನಿರ್ಣಯದೊಂದಿಗೆ ಮೈತ್ರಿ ಅನುಷ್ಠಾನಕ್ಕೆ ಬಂದಿದೆ. ದೇಶ ಮತ್ತು ಸಮಾಜವನ್ನು ವಿಭಜನೆ ಮಾಡುವ ಕೆಲಸ ಮಾಡ್ತಿದೆ. ಭಾರತದ ಸಂಸ್ಕೃತಿ ಮೇಲೆ ದಾಳಿ ಮಾಡುವ ಕುತಂತ್ರ ಮಾಡಿದೆ. ಸಾವಿರಾರು ವರ್ಷಗಳ ನಂಬಿಕೆ ಮುಗಿಸುವ ಕೆಲಸ‌ ಮಾಡುತ್ತಿದೆ ಎಂದು ಆರೋಪಿಸಿದರು.

ಇದಕ್ಕೂ ಮುನ್ನ ಸನಾತನ ಧರ್ಮದ ವಿರುದ್ಧ ನೀಡುವ ಹೇಳಿಕೆಗಳನ್ನು ನೋಡಿಕೊಂಡು ಸುಮ್ಮನಿರದಂತೆ ಪ್ರಧಾನಿ ನರೇಂದ್ರ ಮೋದಿ ತಮ್ಮ ಕ್ಯಾಬಿನೆಟ್ ಸಚಿವರಿಗೆ ಸೂಚನೆ ನೀಡಿದ್ದರು. ಪ್ರಧಾನಿ ನರೇಂದ್ರ‌ ಮೋದಿ ಹೇಳಿಕೆ ಬಳಿಕ ಬಿಜೆಪಿ ನಾಯಕರು ಇಂಡಿಯಾ ಒಕ್ಕೂಟವನ್ನು ಟಾರ್ಗೆಟ್ ಮಾಡಲು ಆರಂಭಿಸಿದ್ದರು.

 

 

Please follow and like us:

tmadmin

Leave a Reply

Your email address will not be published. Required fields are marked *

Next Post

ವೀರ ಯೋಧರನ್ನು ಬಲಿ ಪಡೆದ ಉಗ್ರರ ವಿರುದ್ಧ ಪ್ರತೀಕಾರ ಕ್ಕಿಳಿದ ಭದ್ರತಾಪಡೆ

Thu Sep 14 , 2023
ಶ್ರೀನಗರ,ಸೆ.14- ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಕೋಕರ್ನಾಗ್ ಪ್ರದೇಶದಲ್ಲಿ ಮೂವರು ವೀರ ಯೋಧರನ್ನು ಬಲಿಪಡೆದ ಪ್ರತೀಕಾರಕ್ಕೆ ಭದ್ರತಾ ಪಡೆಗಳು ಇಬ್ಬರು ಲಷ್ರ್ಕ-ಎ-ತೊಯ್ಬಾ ಭಯೋತ್ಪಾದಕರನ್ನು ಸುತ್ತುವರೆದಿವೆ. ಈ ಕುರಿತು ಕಾಶ್ಮೀರ ವಲಯ ಪೊಲೀಸರು ಎಕ್ಸ್ ನಲ್ಲಿ ಪೋಸ್ಟ್ ಶೇರ್ ಮಾಡಿದ್ದಾರೆ. ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಮುನ್ನಡೆಯುತ್ತಿದ್ದ ಕರ್ನಲ್ ಮನ್ಪ್ರೀತ್ ಸಿಂಗ್, ಮೇಜರ್‌ಆಶಿಶ್ ಧೋನಕ್ ಮತ್ತು ಡಿಎಸ್ಪಿ ಹುಮಾಯೂನ್ ಭಟ್ ಅವರ ಅಚಲ ಶೌರ್ಯಕ್ಕೆ ಗೌರವಪೂರ್ವಕ ಶ್ರದ್ಧಾಂಜಲಿ. ಉಝೈರ್ ಖಾನ್ ಸೇರಿದಂತೆ […]

Advertisement

Wordpress Social Share Plugin powered by Ultimatelysocial