200 ರೂ. ದೇಣಿಗೆ ನೀಡಿ ನನ್ನ ಜೊತೆ ಡ್ಯಾನ್ಸ್ ಮಾಡಿ: ಶ್ರೀಯಾ ಶರಣ್

ಕೊರೊನಾ ವಿರುದ್ಧದ ಹೋರಾಟಕ್ಕೆ 200 ರೂ. ದೇಣಿಗೆ ನೀಡಿ ನನ್ನ ಜೊತೆ ಡ್ಯಾನ್ಸ್ ಮಾಡುವ ಅವಕಾಶ ಪಡೆಯಿರಿ ಎಂದು ನಟಿ ಶ್ರೀಯಾ ಶರಣ್ ಅವರು ಹೇಳಿದ್ದಾರೆ. ಕೊರೊನಾ ವಿರುದ್ಧ ಹೋರಾಟದಲ್ಲಿ ಇಡೀ ದೇಶವೇ ಮಗ್ನವಾಗಿದೆ. ಹೀಗಿರುವಾಗ ಕೆಲ ನಟ-ನಟಿಯರು ಕೊರೊನಾ ವಿರುದ್ಧದ ಹೋರಾಟದಲ್ಲಿ ಸರ್ಕಾರದ ಕೈ ಬಲಪಡಿಸುವ ಕೆಲಸ ಮಾಡುತ್ತಿದ್ದಾರೆ. ಇನ್ನೂ ಕೆಲವರು ಹಣದ ರೂಪದಲ್ಲಿ ಸಹಾಯ ಮಾಡಿದರೆ, ಮತ್ತೆ ಕೆಲವರು ಬಡವರಿಗೆ ಹಾಗೂ ನಿರ್ಗತಿಕರಿಗೆ ಆಹಾರ ನೀಡುವ ಮೂಲಕ ನೆರವಾಗುತ್ತಿದ್ದಾರೆ. ಕನ್ನಡ, ತೆಲುಗು ಮತ್ತು ತಮಿಳು ಭಾಷೆಯಲ್ಲಿ ನಟಿಸಿ ದಕ್ಷಿಣ ಭಾರತ ಚಿತ್ರರಂಗದಲ್ಲಿ ಬಹುಭಾಷಾ ನಟಿಯಾಗಿ ಗುರುತಿಸಿಕೊಂಡಿದ್ದ ನಟಿ ಶ್ರೀಯಾ ಶರಣ್ ಕೂಡ ಕೊರೊನಾ ವಿರುದ್ಧದ ಯುದ್ಧಕ್ಕೆ ತನ್ನ ಕೈಲಾದ ಸಹಾಯ ಮಾಡುತ್ತಿದ್ದಾರೆ. ಚೆನ್ನೈನ ಒಂದು ಕೊರೊನಾ ಟಾಸ್ಕ್ ಫೋರ್ಸ್ ಜೊತೆ ಸೇರಿಕೊಂಡಿರುವ ಶ್ರೀಯಾ, ಇನ್‍ಸ್ಟಾಗ್ರಾಮ್‍ನಲ್ಲಿ ಲೈವ್ ಬಂದು ನಾನು ಹೇಳಿದ ಸಂಸ್ಥೆಗೆ 200 ರೂ. ದೇಣಿಗೆ ನೀಡಿದರೆ ನನ್ನ ಜೊತೆ ಡ್ಯಾನ್ಸ್ ಮತ್ತು ಯೋಗ ಮಾಡುವ ಅವಕಾಶ ಪಡೆಯಬಹುದು ಎಂದು ಹೇಳಿಕೊಂಡಿದ್ದಾರೆ. ಈ ವಿಚಾರವಾಗಿ ಇನ್‍ಸ್ಟಾಗ್ರಾಮ್‍ನಲ್ಲಿ ತಾವು ಡ್ಯಾನ್ಸ್ ಮಾಡುತ್ತಿರುವ ವಿಡಿಯೋವನ್ನು ಕೂಡ ಅಪ್ಲೋಡ್ ಮಾಡಿರುವ ಶ್ರೀಯಾ, ನಾನು ಚೆನ್ನೈನ ಒಂದು ಸಂಸ್ಥೆಯ ಜೊತೆ ಕೊರೊನಾ ವಿರುದ್ಧ ಹೋರಾಡಲು ಟೈ ಆಫ್ ಮಾಡಿಕೊಂಡಿದ್ದೇನೆ. ಈ ಸಂಸ್ಥೆ ಲಾಕ್‍ಡೌನ್ ಸಮಯದಲ್ಲಿ ಕೂಲಿ ಕಾರ್ಮಿಕರಿಗೆ, ಅನಾಥರಿಗೆ ಮತ್ತು ಅಂಗವಿಕಲರಿಗೆ ಸಹಾಯ ಮಾಡುತ್ತಿದೆ. ಹೀಗಾಗಿ ಈ ಸಂಸ್ಥೆಗೆ ನೀವು ಕೂಡ 200 ರೂ. ದೇಣಿಗೆ ನೀಡಿ. ನನ್ನ ಜೊತೆ ಡ್ಯಾನ್ಸ್ ಮತ್ತು ಯೋಗ ಮಾಡುವ ಅವಕಾಶ ಪಡೆಯಿರಿ.

Please follow and like us:

Leave a Reply

Your email address will not be published. Required fields are marked *

Next Post

ಇಂದು ರೈತ ಮುಖಂಡರ ಜೊತೆ ಸಿಎಂ ಸಭೆ

Thu May 7 , 2020
ಲಾಕ್​​ಡೌನ್ ಸಂಕಷ್ಟಕ್ಕೆ ಸಿಲುಕಿದವರ ನೆರವಿಗಾಗಿ‌‌ ಘೋಷಿಸಿದ ವಿಶೇಷ ಪ್ಯಾಕೇಜ್‌ನಲ್ಲಿ ರೈತ ಸಮುದಾಯಕ್ಕೆ ನಿರೀಕ್ಷಿತ ಆದ್ಯತೆ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತವಾದ ಹಿನ್ನೆಲೆ ರೈತ ಮುಖಂಡರ ಜೊತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಸಭೆ ನಡೆಸಲಿದ್ದಾರೆ. ಲಾಕ್‌ಡೌನ್ ನಂತರ ಕೃಷಿಕ್ಷೇತ್ರದ ಸಮಸ್ಯೆಗಳು, ಕೈಗೊಳ್ಳಬೇಕಾದ ಪರಿಹಾರಗಳ ಕುರಿತು ಚರ್ಚಿಸಲು ಇಂದು ಸಂಜೆ 4.30 ಕ್ಕೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ರೈತ ಪ್ರತಿನಿಧಿಗಳ ಸಭೆಯನ್ನು ಕರೆದಿದ್ದಾರೆ. ರಾಜ್ಯ ರೈತ ಸಂಘಟನೆಗಳ ಒಕ್ಕೂಟ ರಾಜ್ಯ […]

Advertisement

Wordpress Social Share Plugin powered by Ultimatelysocial