H. D. Kumaraswamy : ಜ.26 ರಿಂದ ಜೆಡಿಎಸ್ ನಿಂದ ‘ಜನತಾ ಜಲಧಾರೆ’ ಆಂದೋಲನ

ಬೆಂಗಳೂರು :ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷ ಇದೇ 9 ರಿಂದ ಆರಂಭಿಸಲಿರುವ ‘ಪಾದಯಾತ್ರೆಗೆ’ ಸೆಡ್ಡು ಹೊಡೆಯುವ ರೀತಿಯಲ್ಲಿ ಜೆಡಿಎಸ್ ಕೂಡಾ ಜನತಾ ಜಲಧಾರೆ ಆಂದೋಲನವನ್ನು ಆರಂಭಿಸುತ್ತಿದೆ.

ಈ ಕುರಿತು ಪಕ್ಷದ ಕೇಂದ್ರ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಶಾಸಕಾಂಗ ಪಕ್ಷದ ಮುಖಂಡ ಎಚ್. ಡಿ. ಕುಮಾರಸ್ವಾಮಿ, ಜನವರಿ 26 ರಿಂದ ಆಂದೋಲನ ಪ್ರಾರಂಭವಾಗಲಿದ್ದು, 2023ರ ಚುನಾವಣೆಯವರೆಗೂ ಮುಂದುವರೆಯಲಿದೆ.

ನದಿ ಮೂಲಗಳಲ್ಲಿರುವ 51 ಸ್ಥಳಗಳಿಗೆ ಯಾತ್ರೆ ಮೂಲಕ ಭೇಟಿ ನೀಡಲಾಗುವುದು ಎಂದರು.

ಆಂದೋಲನಾಕ್ಕಾಗಿ ಪಕ್ಷದ ಶಾಸಕರು, ಮಾಜಿ ಸಚಿವರು, ಹಿರಿಯ ಮುಖಂಡರ ನೇತೃತ್ವದಲ್ಲಿ 15 ತಂಡಗಳನ್ನು ರಚಿಸಲಾಗುವುದು, ಈ ತಂಡಗಳು ನದಿ ಮೂಲಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿ, ಜಲ ಸಂಗ್ರಹಿಸಲಿವೆ, ಜನವರಿ 26 ರಂದು ಆಂದೋಲನಾ ಖಚಿತ. ಒಂದು ವೇಳೆ ಕೋವಿಡ್ ಹೆಚ್ಚಾದಲ್ಲಿ ಕೆಲವು ದಿನಗಳವರೆಗೂ ಇದನ್ನು ಮುಂದೂಡಲಾಗುವುದು ಎಂದು ಅವರು ತಿಳಿಸಿದರು.

ಜೆಡಿಎಸ್ ಗೆ ಸಂಪೂರ್ಣ ಬಹುಮತದೊಂದಿಗೆ ಐದು ವರ್ಷಗಳ ಪೂರ್ಣವಧಿ ಅಧಿಕಾರ ನೀಡಿದರೆ ರಾಜ್ಯದ ಎಲ್ಲ ನದಿಗಳ ನೀರಿನ ಸಮರ್ಪಕ ಬಳಕೆಗೆ ಯೋಜನೆ ರೂಪಿಸಿ, ಅನುಷ್ಠಾನಕ್ಕೆ ಬರುವ ಭರವಸೆಯೊಂದಿಗೆ, ಜನರ ಎದುರು ಬೆಂಬಲ ಕೋರಲಾಗುವುದು ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ROCKINGSTAR:ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ರಜೆ ಕೋರಿ ಪ್ರಿನ್ಸಿಪಾಲ್‌ಗೆ ಪತ್ರ ಬರೆದ ವಿದ್ಯಾರ್ಥಿ;

Fri Jan 7 , 2022
ಅಭಿಮಾನಿಗಳ ಅಭಿಮಾನಕ್ಕೆ ಮಿತಿ ಎಲ್ಲಿದೆ? ತಮ್ಮ ನೆಚ್ಚಿನ ನಟನ ಸಿನಿಮಾ ರಿಲೀಸ್ ಆಗಲಿ. ಹುಟ್ಟುಹಬ್ಬ ಬರಲಿ. ಅವರ ಮನೆಯಲ್ಲಿ ಸಂಭ್ರಮವಿರಲಿ. ಡೈ ಹಾರ್ಡ್ ಫ್ಯಾನ್ಸ್ ತಮ್ಮದೇ ಹುಟ್ಟುಹಬ್ಬವೆಂದು ಆಚರಿಸಿ ಸಂಭ್ರಮಿಸುತ್ತಾರೆ. ಕೆಲವೊಮ್ಮೆ ತಮ್ಮ ಫೇವರಿಟ್ ನಟನ ಸಿನಿಮಾ ನೋಡುವುದಕ್ಕೆ ರಜೆ ಕೊಡಿ ಅಂತ ಅಭಿಮಾನಿಗಳು ಪತ್ರ ಬರೆದಿದ್ದೂ ಇದೆ. ಆದರೆ, ಈ ಬಾರಿ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಯೊಬ್ಬ ಹುಟ್ಟುಹಬ್ಬ ಆಚರಣೆ ಮಾಡಬೇಕು ರಜೆ ಕೊಡಿ ಅಂತ ಪತ್ರ ಬರೆದಿದ್ದಾನೆ. […]

Advertisement

Wordpress Social Share Plugin powered by Ultimatelysocial