25 ವರ್ಷದ ಯುವತಿ ಜೊತೆ ವಿವಾಹವಾಗಿದ್ದ 50 ವರ್ಷದ ಶಂಕರಪ್ಪ ಆತ್ಮಹತ್ಯೆ

ತುಮಕೂರು: 2021ರ ಅಕ್ಟೋಬರ್ 19ರಂದು 45 ವರ್ಷದ ವ್ಯಕ್ತಿಯೊಬ್ಬರು 25 ವರ್ಷದ ಯುವತಿಯನ್ನು ಮದುವೆಯಾಗಿದ್ದು ರಾಜ್ಯಾದ್ಯಂತ ಭಾರಿ ಸುದ್ದಿಯಾಗಿತ್ತು. ಈ ಮದುವೆ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿತ್ತು. ಈ ಅಪರೂಪದ ಮದುವೆ ಇದೀಗ ಆತ್ಮಹತ್ಯೆಯಲ್ಲಿ ಅಂತ್ಯವಾಗಿದೆ.25 ವರ್ಷದ ಮೇಘನಾಳನ್ನು ವಿವಾಹವಾಗಿದ್ದ 45 ವರ್ಷದ ಶಂಕರಣ್ಣ ಇದೀಗ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ತುಮಕೂರಿನ ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗ ಹೋಬಳಿಯ ಅಕ್ಕಿಮರಿ ಪಾಳ್ಯದಲ್ಲಿ ಹೊಲದಲ್ಲಿ ಮರಕ್ಕೆ ನೇಣುಬಿಗಿದುಕೊಂಡು ಶಂಕರಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಘಟನಾ ಸ್ಥಳಕ್ಕೆ ಹುಲಿಯೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಂತೆಮಾವತ್ತೂರು ಗ್ರಾಮದ ನಿವಾಸಿಯಾಗಿದ್ದ ಮೇಘನಾ, ಶಂಕರಣ್ಣ ಬಳಿ ತನ್ನನ್ನು ಮದುವೆಯಾಗುವಂತೆ ಕೇಳಿದ್ದಳು. ಇನ್ನೂ ವಿವಾಹವಾಗದೇ ಇದ್ದ 45 ವರ್ಷದ ಶಂಕರಣ್ಣ ಮೇಘನಾಳನ್ನು ಒಪ್ಪಿ ಮದುವೆಯಾಗಿದ್ದರು. ಆದರೆ ಇದೀಗ ಶಂಕರಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದು ಅಚ್ಚರಿಗೆ ಕಾರಣವಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಾರ್ವತ್ರಿಕ ಮುಷ್ಕರ: ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ

Tue Mar 29 , 2022
ಕಲಬುರಗಿ: ಹತ್ತಕ್ಕೂ ಅಧಿಕ‌ ಕೇಂದ್ರೀಯ ಕಾರ್ಮಿಕ ಸಂಘಟನೆಗಳು ಹಾಗೂ ಏಳು ರಾಜಕೀಯ ಪಕ್ಷಗಳು ಕೇಂದ್ರದ ಜನವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಕರೆ ನೀಡಿರುವ ಸಾರ್ವತ್ರಿಕ ಮುಷ್ಕರದ ಅಂಗವಾಗಿ ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರು ಕೇಂದ್ರ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದರು.ಮುಷ್ಕರದ ಎರಡನೇ ದಿನವಾದ ಇಂದು ಜಿಲ್ಲಾ‌ ಕೇಂದ್ರದಲ್ಲಿ ಪ್ರತಿಭಟನೆ ‌ಆಯೋಜಿಸಲಾಗಿದೆ. ಸೋಮವಾರ ತಾಲ್ಲೂಕು ಹಾಗೂ ‌ಗ್ರಾಮೀಣ ಭಾಗದಲ್ಲಿ ಸರಣಿ ಪ್ರತಿಭಟನೆಗಳನ್ನು ‌ನಡೆಸಲಾಯಿತು.ಈ ಸಂದರ್ಭದಲ್ಲಿ ಭಾರತ ಕಮ್ಯುನಿಸ್ಟ್ (ಮಾರ್ಕ್ಸ್ […]

Advertisement

Wordpress Social Share Plugin powered by Ultimatelysocial