25ನೇ ವರ್ಷದ ಬ್ರಹ್ಮೋತ್ಸವದ ಅಂಗವಾಗಿ ಬೃಹತ್ ಅನ್ನಸಂತರ್ಪಣೆ ಹಾಗೂ ಅಯ್ಯಪ್ಪ ಸ್ವಾಮಿ ಮೆರವಣಿಗೆ.

ದಕ್ಷಿಣ ಕಾಶಿ ನಂಜನಗೂಡಿನ ಕಪಿಲಾ ನದಿ ತಟದಲ್ಲಿ ನೆಲೆಯಾಗಿ ಚಿಕ್ಕ ಶಬರಿಮಲೆಯೆಂದೇ ಹೇಳಲ್ಪಡುವ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ 25ನೇ ಬ್ರಹ್ಮೋತ್ಸವದ ಅಂಗವಾಗಿ ಇಂದು ಸುಮಾರು 25 ಸಾವಿರಕ್ಕೂ ಹೆಚ್ಚು ಭಕ್ತರಿಗೆ ಅನ್ನ ಸಂತರ್ಪಣೆ ಹಾಗೂ ಪ್ರಸಾದ ವಿನಿಯೋಗ ಏರ್ಪಡಿಸಲಾಗಿತ್ತು.
ನಂಜನಗೂಡು ಸೇರಿದಂತೆ ವಿವಿಧ ಕಡೆಯಿಂದ ಭಕ್ತರ ಮಹಾಪೂರವೇ ಹರಿದು ಬಂದಿತ್ತು.
ಬಂದ ಎಲ್ಲ ಭಕ್ತರಿಗೆ ದೇವಾಲಯದ ವತಿಯಿಂದ ಸಿಹಿ ಖಾದ್ಯ ಸೇರಿದಂತೆ ಭರ್ಜರಿ ಅಡುಗೆ ಪ್ರಸಾದ ಮಾಡಲಾಗಿತ್ತು.
ದೇವಾಲಯದ ಗುರುಸ್ವಾಮಿಗಳಾದ ದೇವರಾಜಸ್ವಾಮಿಗಳು ಭಕ್ತರಿಗೆ ಪ್ರಸಾದ ಬಡಿಸುವ ಮೂಲಕ ಅನ್ನ ಸಂತರ್ಪಣೆಗೆ ಚಾಲನೆ ನೀಡಿದರು.
ಬಳಿಕ ಮಧ್ಯಾಹ್ನ 3:00ಘಂಟೆ ಮೇಲೆ ದೇವಾಲಯದಿಂದ ತಂದ ಅಯ್ಯಪ್ಪ ಸ್ವಾಮಿಯ ಉತ್ಸವ ಮೂರ್ತಿಯನ್ನು ಕುದುರೆ ಸಾರೋಟಿನ ಮಾದರಿಯ ರಥದಲ್ಲಿ ಕೂರಿಸಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅದ್ದೂರಿ ಮೆರವಣಿಗೆ ನಡೆಸಲಾಯಿತು.
ಮೆರವಣಿಗೆಯಲ್ಲಿ ವೀರಗಾಸೆ ಡೊಳ್ಳು ಕುಣಿತ ಪೂಜಾ ಕುಣಿತ ಗಾರಡಿ ಗೊಂಬೆ ಹುಲಿ ವೇಷ ಸೇರಿದಂತೆ ಹಲವಾರು ಜಾನಪದ ಕಲಾತಂಡಗಳು ಮೆರವಣಿಗೆಗೆ ಮೆರಗು ನೀಡಿದವು.
ಮೆರವಣಿಗೆಗೆ ಉದ್ದಕ್ಕೂ ಭಕ್ತರು ರಸ್ತೆಗೆ ನೀರು ಹಾಕಿ ರಂಗೋಲಿ ಹಾಕಿ ಪೂಜೆ ಸಲ್ಲಿಸುವ ಮೂಲಕ ತಮ್ಮ ಭಕ್ತಿ ಭಾವ ಮೆರೆದರು.
ಬಳಿಕ ಗುರುಸ್ವಾಮಿಗಳಾದ ದೇವರಾಜಸ್ವಾಮಿ ಮಾತನಾಡಿ 25ನೇ ಬ್ರಹ್ಮೋತ್ಸವದ ಅಂಗವಾಗಿ ನಡೆಯುತ್ತಿರುವ ಅನ್ನಸಂತಪಣೆ ಹಾಗು ಅಯ್ಯಪ್ಪ ಸ್ವಾಮಿ ಮೆರವಣಿಗೆ ಬಗ್ಗೆ ವಿವರಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

 

Please follow and like us:

Leave a Reply

Your email address will not be published. Required fields are marked *

Next Post

ಕೊನೆಯ ಐಪಿಎಲ್ ಆವೃತ್ತಿಯಲ್ಲಿ ಮಿಂಚಿನ ಆಟ!

Wed Dec 21 , 2022
ಇಂಡಿಯನ್ ಪ್ರೀಮಿಯರ್ ಲೀಗ್ ವಿಶ್ವ ಕ್ರಿಕೆಟ್‌ನ ಅತ್ಯುನ್ನತ ಲೀಗ್ ಟೂರ್ನಿ. ಪ್ರತಿಯೊಬ್ಬ ಕ್ರಿಕೆಟರ್ ಕೂಡ ಈ ಪ್ರತಿಷ್ಠಿತ ಟೂರ್ನಿಯಲ್ಲಿ ಪೊಮ್ಮೆಯಾದರೂ ಭಾಗಿಯಾಗಬೇಕು ಎಂಬ ಕನಸು ಕಾಣುತ್ತಿರುವುದು ಸಹಜ. ಈ ಪ್ರತಿಷ್ಠಿತ ಲೀಗ್ ಟೂರ್ನಿಯಲ್ಲಿ ವಿಶ್ವದ ಶ್ರೇಷ್ಠ ಆಟಗಾರರು ಭಾಗಿಯಾಗುತ್ತಿರುವುದು ಇದಕ್ಕೆ ಕಾರಣ.ಇಂಥಾ ಸಂದರ್ಭದಲ್ಲಿ ಆಟಗಾರರಿಗೆ ಕೌಶಲ್ಯವನ್ನು ಹೆಚ್ಚಿಸಿಕೊಳ್ಳುವ ಅವಕಾಶ ದೊರೆಯುತ್ತದೆ. ಜೊತೆಗೆ ಇಂಥಾ ದೊಡ್ಡ ಲೀಗ್‌ನಲ್ಲಿ ದೊಡ್ಡ ಮೊತ್ತದ ಸಂಭಾವನೆಯನ್ನು ಕೂಡ ಪಡೆಯುವ ಅವಕಾಶ ದೊರೆಯುತ್ತದೆ ಎಂಬುದು ಮತ್ತೊಂದು ಕಾರಣ.ಇಂಥಾ […]

Advertisement

Wordpress Social Share Plugin powered by Ultimatelysocial